ಭೂಸಿರಿ ಎಂಬ ನೂತನ ಯೋಜನೆ ಅಡಿ 10,000 ರೂ. ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ರೈತ ಸಿರಿ ಯೋಜನೆಯಡಿಯಲ್ಲಿ ಕಿರುಧಾನ್ಯ ಬೆಳೆಗಾರರಿಗೆ ಪ್ರತಿ ಹೆಕ್ಟರ್ಗೆ 10 ಸಾವಿರ ರೂಪಾಯಿ ಪ್ರೋತ್ಸಾಹಧನ ಘೋಷಣೆ.
ಸಹ್ಯಾದ್ರಿ ಯೋಜನೆಯಡಿಯಲ್ಲಿ ಕರಾವಳಿ ಮಲೆನಾಡು & ಅರೆಮಲೆನಾಡು ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ನೀರು ಸಂರಕ್ಷಣೆಗಾಗಿ ಬಾವಿ, ಕಿಂಡಿ ನಾಳ ಅಭಿವೃದ್ಧಿ ಕಾಮಗಾರಿಗೆ 75 ಕೋಟಿ ರೂ. ಅನುದಾನ ಮೀಸಲಿಡಲಾಗುವುದು ಸಿಎಂ ಘೋಷಣೆ ಮಾಡಿದ್ದಾರೆ.
ಭೂ ಸಿರಿ ಯೋಜನೆಯಡಿ 10,000 ರೂ…
ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಭೂ ಸಿರಿ ಯೋಜನೆಯ ಸಹಾಯಧನ ಹೆಚ್ಚಿಸಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ. 2023-24ನೇ ಸಾಲಿನಿಂದ 10 ಸಾವಿರ ರೂ ಗಳ ಹೆಚ್ಚುವರಿ ಸಹಾಯ ಧನ ನೀಡಲು ನಿರ್ಧರಿಸಲಾಗಿದೆ.
ಈ ಮೊತ್ತದಲ್ಲಿ ರಾಜ್ಯ ಸರ್ಕಾರದ 2,500 ರೂ ಹಾಗೂ ನಬಾರ್ಡ್ನ 7,500 ರೂ ಸೇರಿದ್ದು, ರಾಜ್ಯದ ಸುಮಾರು 50 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದರು.