ಯಾದಗಿರಿ : ರಾಜ್ಯದಲ್ಲಿ ಎಲ್ಲಾ ಕಡೆ ಭಾರಿ ಮಳೆಯಾಗುತ್ತಿದ್ದು ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು ರಾಜ್ಯದ ಹಲವೆಡೆ ಪ್ರವಾಹ ಉಂಟಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಪ್ರವಾಹ ಪೀಡಿತ ಗ್ರಾಮಸ್ಥರನ್ನು ಬೇರೆಡೆಗೆ ಸ್ಥಳಾಂತರ ಮಾಡುತ್ತಿದ್ದಾಗ 15 ದಿನಗಳ ಹಸುಗೂಸೊಂದು ನದಿಗೆ ಬಿದ್ದ ಘಟನೆ ಇಂದು ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರೋಜಾ ಗ್ರಾಮದಲ್ಲಿ ನಡೆದಿದೆ.
ಭೀಮಾ ನದಿಯು ಮೈದುಂಬಿ ಹರಿಯುತ್ತಿದ್ದು, ಗ್ರಾಮಕ್ಕೆ ನುಗ್ಗಿದ ಪರಿಣಾಮ ಸಂಪೂರ್ಣ ಜಲಾವೃತಗೊಂಡಿತ್ತು. ಈ ಸಮಯದಲ್ಲಿ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡುತ್ತಿದ್ದ ವೇಳೆ ತೆಪ್ಪ ಅಲುಗಾಡಿದ ಪರಿಣಾಮ ತಾಯಿಯ ಕೈಯಲ್ಲಿದ್ದ ಮಗು ನೀರಿಗೆ ಬಿದ್ದಿದೆ. ಕೂಡಲೇ ಆ ಮಗುವನ್ನು ಸ್ಥಳೀಯ ಗ್ರಾಮಸ್ಥರು ರಕ್ಷಿಸಿದ್ದು ಪ್ರಾಣಾಪಾಯದಿಂದ ಪಾರಾಗಿದೆ ಎಂದು ತಿಳಿದು ಬಂದಿದೆ.