ಬೆಂಗಳೂರು: ಧಾರವಾಡ ಜಿಲ್ಲೆಯನ್ನು ಸಹ ಸೋಮವಾರದಿಂದ (ಜೂ.21) ಅನ್ ಲಾಕ್ ಮಾಡಲು ಸರ್ಕಾರ ಆದೇಶ ಹೊರಡಿಸಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಅವರು ಶನಿವಾರ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವ ಜಗದೀಶ್ ಶೆಟ್ಟರ್ ಅವರು, ನನ್ನ ಶಿಫಾರಸ್ಸಿನ ಮೇರೆಗೆ ಮಾಹಿತಿಯನ್ನು ಮರುಪರಿಶೀಲಿಸಿ, ಅನ್ ಲಾಕ್ ಮಾಡಲು ಸರ್ಕಾರ ಆದೇಶಿಸಿದ್ದು, ನಾಳೆ ಮುಂಜಾನೆ 6ರಿಂದ ಒಂದನೇ ವರ್ಗದ ಜಿಲ್ಲೆಗಳ ಮಾರ್ಗಸೂಚಿ ಅನುಸಾರ ಧಾರವಾಡ ಜಿಲ್ಲೆಯೂ ಅನ್ ಲಾಕ್ ಆಗಲಿದೆ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಇದಕ್ಕೂ ಮುನ್ನ ಜಗದೀಶ್ ಶೆಟ್ಟರ್ ಅವರು ಧಾರವಾಡ ಜಿಲ್ಲೆಯನ್ನು ಅನ್ ಲಾಕ್ ಕೋರಿ ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವರಿಗೆ ಮನವಿ ಮಾಡಿದ್ದರು.