ಮುಂಗಾರು ಬಳಿಕ ಈಗ ರಾಜ್ಯದಲ್ಲಿ ಹಿಂಗಾರು ಮಳೆಯ ಅಬ್ಬರ ಜೋರಾಗಿದ್ದು, ರಾಜ್ಯದ ಬಹುತೇಕ ಕಡೆ ಇಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಹೌದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಮೈಸೂರು, ಕರಾವಳಿ ಜಿಲ್ಲೆಗಳಲ್ಲಿ ಬೆಳಗ್ಗಿನಿಂದಲೇ ವರುಣಾರ್ಭಟ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ಕೆ ಜಿಲ್ಲೆಗಳಲ್ಲೂ ಗುಡುಗು-ಮಿಂಚು ಸಹಿತ ಮಳೆಯಾಗಬಹುದು. ನಿರಂತರ ಮಳೆ ಕೆಲ ಭಾಗದ ರೈತರಿಗೆ ಹೆಚ್ಚು ನಷ್ಟ ಉಂಟುಮಾಡುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ರಾಜ್ಯದ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದಿದೆ.
ಪ್ರಮುಖ ನಗರಗಳ ತಾಪಮಾನ:
ಬೆಂಗಳೂರು: 26-19, ಮಂಗಳೂರು: 29-24, ಶಿವಮೊಗ್ಗ: 28-21, ಬೆಳಗಾವಿ: 26-20, ಮೈಸೂರು: 28-20, ಮಂಡ್ಯ: 28-21ಮಡಿಕೇರಿ: 23-16, ರಾಮನಗರ: 26-18, ಹಾಸನ: 27-19, ಚಾಮರಾಜನಗರ: 28-20, ಚಿಕ್ಕಬಳ್ಳಾಪುರ: 26-19, ಕೋಲಾರ: 27-20ತುಮಕೂರು: 27-20, ಉಡುಪಿ: 29-24, ಕಾರವಾರ: 28-24, ಚಿಕ್ಕಮಗಳೂರು: 26-18, ದಾವಣಗೆರೆ: 28-21 ಡಿಗ್ರಿ ಸೆಲ್ಸಿಯಸ್ ಇರಲಿದೆ.