ರಾಜ್ಯದಲ್ಲಿ ಮಳೆ ಮುಂದುವರೆದಿದ್ದು, 25 ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದ್ದು, ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಕರಾವಳಿಗೆ ವರುಣಾರ್ಭಟ ಕೊಂಚ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಬೆಳಗಾವಿ, ರಾಯಚೂರು, ಕೊಪ್ಪಳ, ವಿಜಯಪುರ, ಕಲಬುರ್ಗಿ, ಹಾವೇರಿ ಜಿಲ್ಲೆಗಳಿಗೆ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಬೆ.ಗ್ರಾಮಾಂತರ, ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು,ರಾಮನಗರ, ಶಿವಮೊಗ್ಗ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಚಾಮರಾಜನಗರ ಜಿಲ್ಲೆಗೆ ಇಂದು ಆರೆಂಜ್ ಅಲರ್ಟ್, ಮಂಡ್ಯ, ಮೈಸೂರು ಯೆಲ್ಲೋ ಅಲರ್ಟ್ ಘೋಷಿಲಾಗಿದೆ.
ಪ್ರಮುಖ ಜಿಲ್ಲೆಯ ತಾಪಮಾನ:
ಬೆಂಗಳೂರು: 27-20, ಮಂಗಳೂರು: 29-24, ಶಿವಮೊಗ್ಗ: 29-21, ಬೆಳಗಾವಿ: 27-21, ಮೈಸೂರು: 27-19, ಮಂಡ್ಯ: 29-21ಮಡಿಕೇರಿ: 23-17, ರಾಮನಗರ: 29-21. ಹಾಸನ: 27-19, ಚಾಮರಾಜನಗರ: 28-21, ಚಿಕ್ಕಬಳ್ಳಾಪುರ: 27-20, ಕೋಲಾರ: 28-21, ತುಮಕೂರು: 28-20, ಉಡುಪಿ: 29-24, ಕಾರವಾರ: 29-25, ಚಿಕ್ಕಮಗಳೂರು: 26-19, ದಾವಣಗೆರೆ: 29-21 ಡಿಗ್ರಿ ಸೆಲ್ಸಿಯಸ್ ಇರಲಿದೆ.