ಬೆಳಗಾವಿ: ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಂತಸದ ಸುದ್ದಿಯನ್ನು ನೀಡಿದ್ದು, 50 ಸಾವಿರ ಯುವಕರಿಗೆ ಉದ್ಯೋಗ ನೀಡಲಾಗುವುದು ಎಂದು ಹೇಳಿದ್ದಾರೆ.
ಹೌದು, ಬೆಳಗಾವಿ ಜಿಲ್ಲೆಯ ಕಿತ್ತೂರು ಬಳಿ KIADB ಜಾಗದಲ್ಲಿ 1,000 ಎಕೆರೆ ಕೈಗಾರಿಕಾ ಟೌನ್ ಶಿಪ್ ನಿರ್ಮಿಸಲು ನಿರ್ಧರಿಸಿದ್ದು, ಇದರಿಂದ 50 ಸಾವಿರ ಯುವಕರಿಗೆ ಉದ್ಯೋಗ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಚೆನ್ನಮ್ಮನ ಅರಮನೆ ನಿರ್ಮಾಣಕ್ಕೆ 50 ಕೋಟಿ ಕೊಟ್ಟಿದ್ದರು, ನಾವು 115 ಕೋಟಿ ರೂ ಕೊಟ್ಟಿದ್ದೇವೆ ಎಂದು ಹೇಳಿದರು.