ರಾಜಕೀಯ ಅಖಾಡಕ್ಕೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯ ರಜತ್ ಉಳ್ಳಾಗಡ್ಡಿಮಠ್ ಎಂಟ್ರಿ ಕೊಟ್ಟಿದ್ದು, ಅತ್ತೆ ಹೆಬ್ಬಾಳ್ಕರ್ ಕುಕ್ಕರ್ ಕೊಟ್ಟು ಸುದ್ದಿಯಾಗಿದ್ದರೆ, ಅಳಿಯ ರಜತ್ ಕುಕ್ಕರ್ ಜೊತೆಗೆ ದೋಸೆ ಹಂಚು, ಅಡುಗೆ ಪಾತ್ರೆ, ಶರ್ಟ್ ಕೊಟ್ಟು ಸುದ್ದಿಯಾಗಿದ್ದಾರೆ.
ಹೌದು, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ರಜತ್, ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿರುದ್ಧ ತೊಡೆ ತಟ್ಟಲು ಅಣಿಯಾಗಿದ್ದಾರೆ. ಹಾಗಾಗಿ, ಚುನಾವಣೆ ಘೋಷಣೆಗೊ ಮುನ್ನವೇ ಮತದಾರರನ್ನು ಸೆಳೆಯಲು ಕಸರತ್ತು ಆರಂಭಿಸಿದ್ದು, ಹು-ಧಾ ಸೆಂಟ್ರಲ್ ಕ್ಷೇತ್ರದ ಜನರಿಗೆ ಕುಕ್ಕರ್ ಸೇರಿದಂತೆ ವಿವಿಧ ವಸ್ತುಗಳನ್ನು ಹಂಚಿಕೆ ಮಾಡಿದ್ದಾರೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ