ರಾಜ್ಯಾದ್ಯಂತ ಚಳಿಯ ಅಬ್ಬರ ಹೆಚ್ಚಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ತಾಪಮಾನ ಇನ್ನಷ್ಟು ಕುಸಿಯುತ್ತದೆ ಎನ್ನಲಾಗಿದ್ದು, ಇಂದು ಮತ್ತು ನಾಳೆ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮುಖ್ಯವಾಗಿ ಉತ್ತರ ಕರ್ನಾಟಕದ ಬೀದರ್, ಬಾಗಲಕೋಟೆ, ವಿಜಯಪುರ ಸೇರಿ ಹಲವು ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ ದಾಖಲಾಗುತ್ತಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಲವು ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 6 ರಿಂದ 7 ಡಿಗ್ರಿ ಸೆಲ್ಷಿಯಸ್ ಅಥವಾ 3 ರಿಂದ 4 ಡಿಗ್ರಿ ಸೆಲ್ಷಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಹಾಗಾಗಿ ಶೀತಗಾಳಿಯಿಂದ ಜನರು ಎಚ್ಚರದಿಂದಿರುವಂತೆ ಇಲಾಖೆ ಸೂಚನೆ ನೀಡಿದ್ದು, ಚಳಿಯಿಂದ ಪಾರಾಗಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸೂಚನೆ ನೀಡಿದೆ.