ಬೀಟ್ರೂಟ್ನಲ್ಲಿ ಆಂಟಿಆಕ್ಸಿಡೆಂಟ್ಗಳು ಮತ್ತು ಪೋಷಕಾಂಶಗಳು ಹೇರಳವಾಗಿದ್ದು, ಇದು ಮಧುಮೇಹಿಗಳಿಗೆ ಉತ್ತಮವಾದ ಆಹಾರವಾಗಿದ್ದು, ಹೃದಯದ ಆರೋಗ್ಯ ಹಾಗೂ ಬೆಳವಣಿಗೆಗೆ ಉತ್ತಮ ಪೋಷಕಾಂಶವಾಗಿದೆ.
ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಹಠಾತ್ ಸ್ಪೈಕ್ಗಳನ್ನು ತಡೆಯಲು ಬೀಟ್ರೂಟ್ ಸಹಾಯ ಮಾಡುತ್ತದೆ. ಮೂತ್ರಪಿಂಡ ಕಾಯಿಲೆ, ನರರೋಗ, ಮಧುಮೇಹ ಕಾಲು ಕಾಯಿಲೆ ಮತ್ತು ಹೃದಯ ಕಾಯಿಲೆಯಂತಹ ತೊಂದರೆಯಿಂದ ತಪ್ಪಿಸುತ್ತದೆ.
ಮಧುಮೇಹ ನಿಯಂತ್ರಿಸಲು ನೆಲ್ಲಿಕಾಯಿ ಸೇವಿಸಿ:
ಇನ್ನು, ಪೋಷಕಾಂಶಗಳಿಂದ ಸಮೃದ್ಧಿಯಾಗಿರುವ ನೆಲ್ಲಿಕಾಯಿ ಸೇವನೆ ಉತ್ತಮ ಆರೋಗ್ಯಕ್ಕೆ ಪೂರಕ. ಇದರಲ್ಲಿ ಮಿಟಮಿನ್ ಸಿ, ಕ್ಯಾಲೋರಿ, ಫೈಬರ್, ಕಾರ್ಬೋಹೈಡ್ರೇಟ್ಗಳು ಸೇರಿದಂತೆ ಅನೇಕ ಪೋಷಕಾಂಶಗಳು ಇದರಲ್ಲಿವೆ.
ನೆಲ್ಲಿಕಾಯಿ ಸೇವನೆಯಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಇದು ಕ್ಯಾನ್ಸರ್ ತಡೆಗಟ್ಟುವ ಗುಣ ಹೊಂದಿದ್ದು, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಉಸಿರಾಟದ ಸಮಸ್ಯೆಯನ್ನು ಕೂಡ ಸುಧಾರಿಸುತ್ತದೆ.