ಮುಂಬರುವ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರ್ಜರಿ ಭರವಸೆಗಳನ್ನು ಘೋಷಿಸಿದ್ದಾರೆ.
ಹೌದು, ಚುನಾವಣೆಯಲ್ಲಿ ಗೆದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ₹500ಕ್ಕೆ LPG ಗ್ಯಾಸ್, ಪೆಟ್ರೋಲ್-ಡೀಸೆಲ್ ದರ ಇಳಿಕೆ, ಯುವಕರಿಗೆ ಉದ್ಯೋಗ ಕಲ್ಪಿಸುತ್ತೇವೆ ಎಂದು ಜನರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಹಿರಂಗ ಪತ್ರ ಬರೆದಿದ್ದಾರೆ. ‘ಹೆದರಬೇಡಿ, ನಿಮ್ಮ ಹೃದಯದಿಂದ ಭಯ ಕಿತ್ತೊಗೆಯಿರಿ. ದ್ವೇಷ ನಿಮ್ಮಿಂದ ದೂರವಾಗಲಿದೆ’ ಎಂದು ಪತ್ರದ ಮೂಲಕ ರಾಹುಲ್ ಅಭಯ ನೀಡಿದ್ದಾರೆ.