ಬೆಂಗಳೂರು: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ ಹೊರಬಿದ್ದಿದ್ದು, ರಾಜ್ಯದ ವಸತಿ ಶಾಲೆಗಳಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದಲೇ ಪದವಿ ಪೂರ್ವ ಶಿಕ್ಷಣ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ
ನಿನ್ನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಎರಡು ದಿನಗಳ ವಿಜ್ಞಾನ ಮೇಳ-2023 ವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಹತ್ತು ವರ್ಷ ಪೂರೈಸಿರುವ ರಾಜ್ಯದ ಸರ್ಕಾರಿ ವಸತಿಶಾಲೆಗಳಲ್ಲಿ ಮುಂದಿನ ವರ್ಷದಿಂದಲೇ ಪಿಯು ಶಿಕ್ಷಣ ಆರಂಭಿಸಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಎಲ್ಲಾ ವ್ಯವಸ್ಥೆ ಇರುವ ವಸತಿ ಶಾಲೆಗಳಲ್ಲಿ ಮುಂದಿನ ವರ್ಷದಿಂದ ಕಡ್ಡಾಯವಾಗಿ ಪಿಯುಸಿ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಒಂದು ವಸತಿಶಾಲೆಗೆ ₹30 ಕೋಟಿ ವೆಚ್ಚವಾಗುತ್ತದೆ. ಆದರೂ ಮಕ್ಕಳಿಗೆ ಸೂಕ್ತ ವ್ಯವಸ್ಥೆ ಆಗಿಲ್ಲ. ಇದು ಹಿಂದಿನ ಸರ್ಕಾರಗಳ ಬಳುವಳಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.