ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.
ಹೌದು, ಪ್ರಹ್ಲಾದ್ ಜೋಶಿ ಸಿಎಂ ಆದರೆ, ಬರೋಬ್ಬರಿ 8 ಜನರು ಉಪಮುಖ್ಯಮಂತ್ರಿ ಆಗಲಿದ್ದು, ಈ ಕುರಿತು ದೆಹಲಿಯಲ್ಲಿ ಆರ್ಎಸ್ಎಸ್ ಮುಖಂಡರ ಸಭೆ ನಡೆದಿದೆ ಎಂದು ಹೆಚ್ಡಿಕೆ ತಿಳಿಸಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯದ ಜನರು ಆರ್ಎಸ್ಎಸ್, ಬಿಜೆಪಿ ಕಳ್ಳಾಟಕ್ಕೆ ಬಲಿಯಾಗಬೇಡಿ ಎಂದು ಹೆಚ್ಡಿಕೆ ಅವರು ಮನವಿ ಮಾಡಿದ್ದಾರೆ.