ಅಂಗನವಾಡಿ, ಆಶಾ ಕಾರ್ಯಕರ್ತೆಯರ ಸಹಾಯ ಧನ ಹೆಚ್ಚಳ ಮಾಡಿದ ಸರ್ಕಾರ. ಇಂದಿನ ಬಜೆಟ್ನಲ್ಲಿ ಸಹಾಯಧನ ಹೆಚ್ಚಿಸುವುದಾಗಿ ಘೋಷಿಸಲಾಗಿದೆ. ಇತ್ತೀಚಿಗೆ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳ ಈಡೇರಿಸುವಂತೆ ಕೋರಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಗೆ ಮಣಿದ ಸರ್ಕಾರ ಅವರ ಬೇಡಿಕೆಗಳಿಗೆ ಒಪ್ಪಿಗೆ ಸೂಚಿಸಿತ್ತು. ಇದೀಗ ಅವರ ಸಹಾಯಧನ ಏರಿಸಲು ನಿರ್ಧರಿಸಿದೆ.
state budget 2023 highlets:
* ಅಂಗನವಾಡಿ, ಆಶಾ ಕಾರ್ಯಕರ್ತೆಯರ ಸಹಾಯಧನ ಏರಿಕೆ ಮಾಡಲಾಗಿದೆ. 1,000ದಿಂದ 1,500 ರೂಪಾಯಿಗೆ ಏರಿಕೆ ಮಾಡಲಾಗಿದೆ.
* ಗ್ರಾಮ ಸಹಾಯಕರ ಹುದ್ದೆ ಜನಸೇವಕ ಎಂದು ಮರುನಾಮಕರಣ
* ದೇವಸ್ಥಾನಗಳು ಮತ್ತು ಮಠಗಳ ಜೀರ್ಣೋದ್ಧಾರಕ್ಕೆ 1000 ಕೋಟಿ
* ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಭೂ ಸಿರಿ ಯೋಜನೆ
* ಬಸವಕಲ್ಯಾಣದ ಅನುಭವ ಮಂಟಪದ ನಿರ್ಮಾಣದ ಕಾಮಗಾರಿ ಶೀಘ್ರ ಪೂರ್ಣ
* ವಸತಿ ರಹಿತ ಮೀನುಗಾರರಿಗೆ ವಿಶೇಷ ಸೌಲಭ್ಯ