ರಾಜ್ಯದಲ್ಲಿ ಇನ್ನು 2 ದಿನ ಗುಡುಗು-ಮಿಂಚು ಸಹಿತ ಆಲಿಕಲ್ಲು ಮಳೆ ಬೀಳಲಿದ್ದು, ಮುಂದಿನ 48 ಗಂಟೆಗಳಲ್ಲಿ ದೆಹಲಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನು ಓದಿ: ಸರ್ಕಾರದ ಅದ್ಬುತ ಯೋಜನೆ: ತಿಂಗಳಿಗೆ 200 ರೂ ಕಟ್ಟಿದರೆ ಸಾಕು, ಪ್ರತಿ ತಿಂಗಳು 5 ಸಾವಿರ ರೂ, ಒಂದೇ ಬಾರಿಗೆ 8.5 ಲಕ್ಷ ರೂ.!
ಗರಿಷ್ಠ ಉಷ್ಣಾಂಶ ಮತ್ತು ಬಿಸಿ ಗಾಳಿ ತೀವ್ರತೆಗೆ ತತ್ತರಿಸಿದ್ದ ರಾಜ್ಯದ ಕರಾವಳಿ-ಒಳನಾಡು ಜಿಲ್ಲೆಗಳಿಗೆ ಈಗ ಸುರಿಯುತ್ತಿರುವ ಅಕಾಲಿಕ ಮಳೆ ತಂಪೆರೆಯುವಂತೆ ಮಾಡಿದೆ. ಮಾರ್ಚ್ 24ರ ಬಳಿಕವೂ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ನಿನ್ನೆ ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ ಸೇರಿ ಅನೇಕ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿತ್ತು.
ಇದನ್ನು ಓದಿ: ಖ್ಯಾತ ನಟಿಗೆ ಈ ಹೆಸರೇ ಸಮಸ್ಯೆ; ವಿಚ್ಛೇದನ ಬಳಿಕ ಎದುರಾದ ಸಮಸ್ಯೆ ಬಿಚ್ಚಿಟ್ಟ ಮಲೈಕಾ ಆರೋರ
ಕರಾವಳಿಯ ಉಡುಪಿ, ದ. ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಬೀದರ್, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ,ಬೆಂ.ಗ್ರಾಮಾಂತರ,ಚಾಮರಾಜನಗರದಲ್ಲಿ ಮಳೆ ಸಾಧ್ಯತೆ ಇದೆ.
ಇದನ್ನು ಓದಿ: ಮಾರ್ಚ್ 31 ಡೆಡ್ ಲೈನ್: SMS ಮೂಲಕ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಲಿಂಕ್ ಮಾಡುವುದು ಹೇಗೆ?