ಈ ಜಿಲ್ಲೆಗಳಲ್ಲಿ 3 ದಿನ ಗುಡುಗು ಸಹಿತ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ

ಭಾರೀ ತಾಪಮಾನ ನಡುವೆಯೇ ರಾಜ್ಯಾದ್ಯಂತ ಇಂದಿನಿಂದ ಮೂರು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಈ ಕುರಿತು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇಂದಿನಿಂದ ಮಾರ್ಚ್ 27 ರವರೆಗೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ…

Heavy Rain

ಭಾರೀ ತಾಪಮಾನ ನಡುವೆಯೇ ರಾಜ್ಯಾದ್ಯಂತ ಇಂದಿನಿಂದ ಮೂರು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಈ ಕುರಿತು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇಂದಿನಿಂದ ಮಾರ್ಚ್ 27 ರವರೆಗೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ.

ಇದನ್ನು ಓದಿ: ಮೋದಿ ಸರ್ಕಾರದ ಭರ್ಜರಿ ಗಿಫ್ಟ್‌; ನೌಕರರ ತುಟ್ಟಿ ಭತ್ಯೆ ಹೆಚ್ಚಳ; ನೌಕರರ ಸಂಬಳ ಎಷ್ಟು ಹೆಚ್ಚಾಗಲಿದೆ?

ಹೌದು, ಇಂದಿನಿಂದ ಮಾರ್ಚ್ 27 ರವರೆಗೆ ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಹಾಗೂ ರಾಮನಗರದಲ್ಲಿ ಹಾಗೂ ಮಾರ್ಚ್ 26 ರಿಂದ ಬೀದರ್ ಹಾಗೂ ಕಲಬುರಗಿಯಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Vijayaprabha Mobile App free

ಇದನ್ನು ಓದಿ: ಮುಸ್ಲಿಮರ 2ಬಿ ಮೀಸಲಾತಿ ರದ್ದುಗೊಳಿಸಿ, ಒಕ್ಕಲಿಗ, ಲಿಂಗಾಯತರಿಗೆ ಹಂಚಿಕೆ; ಯಾರಿಗೆ ಎಷ್ಟು ಮೀಸಲಾತಿ, ಇಲ್ಲಿದೆ ಸಂಪೂರ್ಣ ಮಾಹಿತಿ

ಇನ್ನು, ಉಳಿದಂತೆ ರಾಜ್ಯಾದ್ಯಂತ ಇಂದೂ ಕೂಡ ಭಾರೀ ಬಿಸಿಲಿನ ವಾತಾವರಣ ಇರಲಿದ್ದು, ಮಧ್ಯಾಹ್ನ 12 ರಿಂದ 2 ಗಂಟೆಯ ನಡುವೆ ವಿಪರೀತ ಬಿಸಿಲು ಇರಲಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸುರಿಯುತ್ತಿದ್ದ ಮಳೆ ನಿಂತಿದ್ದು, ಎಲ್ಲಾ ಕಡೆ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇದನ್ನು ಓದಿ: ಕ್ರಿಕೆಟ್ ಅಭಿಮಾನಿಗಳಿಗೆ Jio ವಿಶೇಷ ಕೊಡುಗೆ; 40 GB ವರೆಗೆ ಉಚಿತ ಡೇಟಾ, Jio 3 ಪ್ರಿಪೇಯ್ಡ್ ಯೋಜನೆಗಳು ಇವೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.