ಬೆಂಗಳೂರು: 2022-23ನೇ ಶೈಕ್ಷಣಿಕ ಸಾಲಿನಿಂದ ಎಸ್ಎಸ್ಎಲ್ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸ್ವರೂಪ ಬದಲಾಗಲಿದ್ದು, ಕಠಿಣತೆಯ ಮಟ್ಟ ಸರಳಗೊಳಿಸಲಾಗಿದ್ದು, ಈ ಸಂಬಂಧ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸುತ್ತೋಲೆ ಹೊರಡಿಸಿದೆ.
ಹೌದು, 2015-16ನೇ ಸಾಲಿನಲ್ಲಿ ಪ್ರಶ್ನೆಪತ್ರಿಕೆ ಪರಿಷ್ಕರಿಸಲಾಗಿತ್ತು. 2020-21ನೇ ಸಾಲಿನಿಂದ ಕೋವಿಡ್ ಇದ್ದಿದ್ದರಿಂದ ಪರೀಕ್ಷೆಯನ್ನು ಸರಳೀಕರಿಸಿ, ಬಹುಆಯ್ಕೆ ಪ್ರಶ್ನೆ ಆಧರಿತವಾಗಿ ಪರೀಕ್ಷೆ ನಡೆಸಲಾಗಿತ್ತು. ಅದೇ ಮಾದರಿಯನ್ನು ಈ ಸಾಲಿಗೂ ಮುಂದುವರೆಸುವುದಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸುತ್ತೋಲೆ ಹೊರಡಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.