ರಾಜ್ಯದಲ್ಲಿ ಮನೆಗಳಿಗೆ ಏಕರೂಪದ ವಿದ್ಯುತ್ ದರ ಜಾರಿಗೆಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಸುನಿಲ್ ಕುಮಾರ್ ಅವರು, ವಿದ್ಯುತ್ ಸಂಪರ್ಕಕ್ಕೆ ಗ್ರಾಮ ಪಂಚಾಯತ್ ಅನುಮತಿ ಕಡ್ಡಾಯ ಎಂಬುದನ್ನು ಮತ್ತೆ ನೆನಪಿಸಿದ್ದು, ವಿದ್ಯುತ್ ಗುತ್ತಿಗೆದಾರರ ಸಂಘದ ವೆಬ್ಸೈಟ್ ಮತ್ತು ಲಾಂಛನ ಬಿಡುಗಡೆಗೊಳಿಸಿ ಕಾರ್ಯ ವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
‘ವಿದ್ಯುತ್ ಸಂಪರ್ಕಕ್ಕೆ ದೃಢೀಕರಣ ಪತ್ರ ಬೇಕಿಲ್ಲ’
ಇನ್ನು, ಬೆಳಕು ಯೋಜನೆ ಅಡಿ ವಿದ್ಯುತ್ ಸಂಪರ್ಕ ಕಲ್ಪಿಸಲು ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಪಂಚಾಯ್ತಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅನುಮತಿ ಕಡ್ಡಾಯವಲ್ಲ ಎನ್ನುವ ಆದೇಶ ಹೊರಡಿಸಲಾಗಿದೆ ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ಹೇಳಿದರು.
ವಿದ್ಯುತ್ ಸಂಪರ್ಕ ಪಡೆಯಲು ನಾಲ್ಕೂವರೆ ವರ್ಷಗಳ ವಾಸಸ್ಥಳ ದೃಢೀಕರಣ ಪತ್ರ ನೀಡಬೇಕೆಂಬ ಹಿಂದಿನ ಸರ್ಕಾರದ ಆದೇಶವನ್ನು ರದ್ದು ಪಡಿಸಿದ್ದು, ವಿದ್ಯುತ್ ಪರಿವರ್ತಕಗಳನ್ನು 4 ಗಂಟೆಯಲ್ಲೇ ಬದಲಾವಣೆ ಮಾಡಲು ಕಾರ್ಯಾದೇಶ ನೀಡಲಾಗಿದೆ ಎಂದು ಹೇಳಿದ್ದಾರೆ.