ಬೆಂಗಳೂರು: ಜಿಎಸ್ಟಿ ಏರಿಕೆಯಿಂದಾಗಿ ರಾಜ್ಯದಲ್ಲಿ ಹಾಲು, ಮೊಸರು ದರ ಹೆಚ್ಚಳವಾದ ಹಿನ್ನೆಲೆಯಲ್ಲಿ ಜನಸಾಮಾನ್ಯರ ಆಕ್ರೋಶ ಭುಗಿಲೆದ್ದಿದ್ದು, ಜನಸಾಮಾನ್ಯರ ವಿರೋಧವನ್ನು ಪರಿಗಣಿಸಿ ನಂದಿನಿ ಹಾಲು, ಮೊಸರು ಬೆಲೆ ಇಳಿಕೆಗೆ KMFಗೆ ಸೂಚನೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬೆಂಗಳೂರಿನಲ್ಲಿ ಹೇಳಿದ್ದಾರೆ.
ಹೊಸ GST ನೀತಿ ಜಾರಿ ಹಿನ್ನೆಲೆಯಲ್ಲಿ ನಂದಿನಿ ಉತ್ಪನ್ನಗಳಾದ ಮೊಸರಿಗೆ 3ರೂ. ಪನ್ನೀರ್ ಕೆಜಿಗೆ 15 ರೂ. ಹಾಗೂ ಇನ್ನಿತರೆ ಹಾಲಿನ ಉತ್ಪನ್ನಗಳಿಗೆ ಬೆಲೆ ಏರಿಕೆ ಮಾಡಲಾಗಿತ್ತು. ಜುಲೈ 18 ರಿಂದ ಹೊಸ ದರಗಳು ಜಾರಿಗೆ ಬಂದಿದ್ದವು. ದರ ಇಳಿಕೆ ಯಾವತ್ತಿನಿಂದ ಜಾರಿಯಾಗುತ್ತದೆ ಅನ್ನುವ ಬಗ್ಗೆ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.