ರಾಷ್ಟ್ರಪತಿ ಚುನಾವಣೆಯಲ್ಲಿ ನೂತನವಾಗಿ ರಾಷ್ಟೀಪತಿಗಳಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಅವರು ಇಂದು ಭಾರತದ 15ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಹೌದು, ದೆಹಲಿಯ ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಬೆಳಗ್ಗೆ 10.15ಕ್ಕೆ ಮುರ್ಮು ಅವರು ಸಿಜೆಐ ನ್ಯಾಯಮೂರ್ತಿ ರಮಣ ಅವರಿಂದ ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕರಿಸಲಿದ್ದು, ಬಳಿಕ ಸೈನಿಕರು ‘21 ಗನ್ ಸೆಲ್ಯೂಟ್’ ಸಲ್ಲಿಸಲಿದ್ದಾರೆ. ನಂತರ ಮುರ್ಮು ಅವರು ಅಧ್ಯಕ್ಷರಾಗಿ ಮೊದಲ ಬಾರಿಗೆ ಭಾಷಣ ಮಾಡಲಿದ್ದಾರೆ.
ಈ ಸಂದರ್ಭದಲ್ಲಿ ಲೋಕಸಭೆಯ ಸ್ಪೀಕರ್, ಉಪರಾಷ್ಟ್ರಪತಿಗಳು ಹಾಗೂ ಪ್ರಧಾನ ಮಂತ್ರಿಗಳು ಭಾಗವಹಿಸಲಿದ್ದಾರೆ.ಈ ಕಾರ್ಯಕ್ರಮದ ಸಿದ್ಧತೆಯನ್ನು ಅಧಿಕಾರಿಗಳು ಪೂರ್ಣಗೊಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.