ರಾಜ್ಯ ಸರ್ಕಾರ ಮತ್ತೊಮ್ಮೆ ಮುಜುಗರಕ್ಕೀಡಾಗಿದೆ. ಹೌದು, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆನಂದ್ ಸಿಂಗ್ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿ ಶಶಿಕಲಾ ಜೊಲ್ಲೆ ನೇಮಿಸಿ ನಿನ್ನೆ ಸರ್ಕಾರ ಆದೇಶ ಹೊರಡಿಸಿತ್ತು.
ಆದರೆ, ಇಂದು ಮತ್ತೆ ರಾಜ್ಯ ಸರ್ಕಾರ ಈ ಆದೇಶವನ್ನು ರದ್ದು ಮಾಡಿದೆ. ಹೀಗಾಗಿ, ಕೊಪ್ಪಳ ಜಿಲ್ಲಾ ಉಸ್ತುವಾರಿಯಾಗಿ ಆನಂದ್ ಸಿಂಗ್ ಮತ್ತು ವಿಜಯನಗರ ಜಿಲ್ಲೆ ಉಸ್ತುವಾರಿಯಾಗಿ ಶಶಿಕಲಾ ಜೊಲ್ಲೆ ಅವರು ಮುಂದುವರಿಯಲಿದ್ದಾರೆ. ಇದರಿಂದ ವಿಜಯನಗರ ಜಿಲ್ಲೆ ಉಸ್ತುವಾರಿ ಕನಸು ಕಂಡಿದ್ದ ಸಚಿವ ಆನಂದ್ ಸಿಂಗ್ ಗೆ ನಿರಾಸೆಯಾದಂತಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.