ಟಾಲಿವುಡ್ ಸ್ಟಾರ್ ದಂಪತಿ ನಟ ನಾಗ ಚೈತನ್ಯ ಹಾಗೂ ನಟಿ ಸಮಂತಾ ರುತ್ ಪ್ರಭು ಇಬ್ಬರು ದೂರವಾಗಿ ತಿಂಗಳುಗಳೇ ಕಳೆದಿವೆ. ಆದರೆ ಇವರಿಬ್ಬರ ಡಿವೋರ್ಸ್ ಗೆ ಕಾರಣವೇನು ಎಂಬುವುದು ಇನ್ನು ತಿಳಿದು ಬಂದಿಲ್ಲ.
ಆದರೆ, ನಾಗ ಚೈತನ್ಯ ಇತ್ತೀಚಿಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಮ್ಮ ತುಂಟತನದ ಘಟನೆಯೊಂದನ್ನು ನೆನಪಿಸಿಕೊಂಡಿದ್ದು, ಹೈದರಾಬಾದ್ನಲ್ಲಿ ಹುಡುಗಿಯೊಬ್ಬಳಿಗೆ ಕಾರ್ ನಲ್ಲಿ ಕದ್ದು ಮುಚ್ಚಿ ಕಿಸ್ ಮಾಡಲು ಹೋದಾಗ ಪೊಲೀಸರ ಕೈಯಲ್ಲಿ ಸಿಕ್ಕಿ ಬಿದ್ದ ವಿಚಾರವನ್ನು ಒಪ್ಪಿಕೊಂಡಿದ್ದಾರೆ.
ನಟಿ ಸಮಂತಾ ಜೊತೆ ನಾಗ ಚೈತನ್ಯ ಪ್ರೀತಿಯಲ್ಲಿ ಬೀಳುವುದಕ್ಕೂ ಮುನ್ನವೇ ಈ ಥರ ಒಂದು ಘಟನೆ ನಡೆದಿತ್ತು ಎಂದು ಹೇಳಿಕೊಂಡಿದ್ದು, ಆದ್ರೆ ನಾಗ ಚೈತನ್ಯ ಆ ಹುಡುಗಿ ಯಾರು ಎಂದು ಹೇಳಿಕೊಂಡಿಲ್ಲ. ಆ ಹುಡುಗಿ ಯಾರು ಎಂಬುದು ಸದ್ಯಕ್ಕೆ ಸಸ್ಪೆನ್ಸ್ ಆಗಿಯೇ ಉಳಿದಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.