ಭಾರೀ ಮಳೆಯಿಂದ ಉಂಟಾಗಿರುವ ಪ್ರವಾಹಕ್ಕೆ ಪಾಕಿಸ್ತಾನ ತತ್ತರಿಸಿದ್ದು, ಪರಿಣಾಮ ಲಾಹೋರ್ನಲ್ಲಿ ತರಕಾರಿಗಳ ಬೆಲೆಗಳು ಗಗನಕ್ಕೇರಿದ್ದು, ಗ್ರಾಹಕರು 1 ಕೆಜಿ ಈರುಳ್ಳಿ ಖರೀದಿಗೆ ಬರೋಬ್ಬರಿ 300 ರೂ, ಅದೇ ರೀತಿ 1 ಕೆಜಿ ಟೊಮೆಟೊಗೆ 400 ರೂಪಾಯಿ ನೀಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.
ಹೌದು, ಅಂದಾಜಿನ ಪ್ರಕಾರ, ಸಿಂಧ್ ಮತ್ತು ಪಂಜಾಬ್ ಪ್ರಾಂತ್ಯಗಳಲ್ಲಿ ಕಬ್ಬು, ಹತ್ತಿ ಬೆಳೆಗಳು ಸಂಪೂರ್ಣವಾಗಿ ನಾಶವಾಗಿದ್ದು, ಈರುಳ್ಳಿ, ಟೊಮೆಟೊ ಮತ್ತು ಮೆಣಸಿನಕಾಯಿ ಬೆಳೆಗಳು ಭಾಗಶಃ ಹಾನಿಗೊಳಗಾಗಿವೆ. ಇದರ ಪರಿಣಾಮ ತರಕಾರಿಗಳ ಬೆಲೆಗಳು ಗಗನಕ್ಕೇರಿದ್ದು, ಗ್ರಾಹಕರು ಅನಿವಾರ್ಯತೆಯಿಂದ ಖರೀದಿಸಬೇಕಾದ ಪರಿಸ್ಥಿತಿ ಬಂದಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.