ದಾವಣಗೆರೆ: ರೈತರಿಗೆ ಆಧುನಿಕ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ ಬಗ್ಗೆ ತರಬೇತಿ

ದಾವಣಗೆರೆ:ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆಯಲ್ಲಿರುವ ಪಿ.ಬಿ. ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ರೈತರಿಗೆ ಪಶುಸಂಗೋಪನಾ…

animal-husbandry-vijayaprabha-news

ದಾವಣಗೆರೆ:ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆಯಲ್ಲಿರುವ ಪಿ.ಬಿ. ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ರೈತರಿಗೆ ಪಶುಸಂಗೋಪನಾ ಚಟುವಟಿಕೆ ಕುರಿತು ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ಹೌದು,ಸೆಪ್ಟೆಂಬರ್ 05 ರಿಂದ ಸೆ.13 ರವರೆಗೆ ಕುರಿ ಮತ್ತು ಮೇಕೆ ಸಾಕಾಣಿಕೆ ಬಗ್ಗೆ ತರಬೇತಿ, ಆಧುನಿಕ ಹೈನುಗಾರಿಕೆ ಬಗ್ಗೆ ತರಬೇತಿ ಕಾರ್ಯಕ್ರಮದಲ್ಲಿ ತಲಾ 25 ಜನರಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದೆ.

ಇನ್ನು, ಈ ತರಬೇತಿಗೆ ಹಾಜರಾಗುವ ರೈತರು ಎರಡು ಪಾಸ್‍ಪೋರ್ಟ್ ಸೈಜ್ ಫೋಟೋ, ಆಧಾರ್ ಕಾರ್ಡ್ ಜೆರಾಕ್ಸ್ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ತರಬೇಕು, ತರಬೇತಿ ಅವಧಿಯಲ್ಲಿ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

Vijayaprabha Mobile App free

ಹೆಚ್ಚಿನ ಮಾಹಿತಿಗಾಗಿ ಪಶುವೈದ್ಯಕೀಯ ಸಹಾಯಕರ ತರಬೇತಿ ಕೇಂದ್ರ ದಾವಣಗೆರೆ, ದೂರವಾಣಿ ಸಂಖ್ಯೆ 08192-233787 ಗೆ ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.