ಬೆಂಗಳೂರು: ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು ರಾಜಧರ್ಮ, ಬೊಮ್ಮಾಯಿ ಸರ್ಕಾರಕ್ಕೆ ತನ್ನ ಮಾತಿನ ಮೇಲೇ ನಿಲ್ಲುವ ಯೋಗ್ಯತೆಯಿಲ್ಲ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಹೌದು, ಈ ಕುರಿತು ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, BJP ಸರ್ಕಾರ ಕೇವಲ 15 ದಿನದ ಹಿಂದಷ್ಟೇ SC/ST ಸಮುದಾಯದ BPL ಕಾರ್ಡ್ದಾರರಿಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆ ಘೋಷಿಸಿ ಈಗ ಏಕಾಏಕಿ ಹಿಂಪಡೆದಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರ ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುವ ನಾಟಕ ಯಾಕೆ ಆಡಬೇಕು? ಕೊಟ್ಟ ಮಾತನ್ನೂ ಉಳಿಸಿಕೊಳ್ಳುವ ಬದ್ಧತೆ ಈ ಸರ್ಕಾರಕ್ಕಿಲ್ಲವೆ?
ಉಚಿತ ವಿದ್ಯುತ್ಗಾಗಿ SC/ST ಸಮುದಾಯದವರೂ ಈ ಸರ್ಕಾರಕ್ಕೇನು ಅರ್ಜಿಯೂ ಹಾಕಿರಲಿಲ್ಲ, ಭಿಕ್ಷೆಯೂ ಬೇಡಿರಲಿಲ್ಲ. ಸ್ವತಃ ಸರ್ಕಾರವೇ 75ಯೂನಿಟ್ ಉಚಿತ ವಿದ್ಯುತ್ ಯೋಜನೆ ಘೋಷಿಸಿ, ಈಗ ಸದ್ದೇ ಇಲ್ಲದೆ ವಾಪಾಸ್ ಪಡೆದಿದೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು ರಾಜಧರ್ಮ. ಈ ಬೊಮ್ಮಾಯಿ ಸರ್ಕಾರಕ್ಕೆ ತನ್ನ ಮಾತಿನ ಮೇಲೇ ನಿಲ್ಲುವ ಯೋಗ್ಯತೆಯಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
1#BJP ಸರ್ಕಾರ ಕೇವಲ 15 ದಿನದ ಹಿಂದಷ್ಟೇ SC/ST ಸಮುದಾಯದ BPL ಕಾರ್ಡ್ದಾರರಿಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆ ಘೋಷಿಸಿ ಈಗ ಏಕಾಏಕಿ ಹಿಂಪಡೆದಿದೆ.@BSBommai ಸರ್ಕಾರ ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುವ ನಾಟಕ ಯಾಕೆ ಆಡಬೇಕು?
ಕೊಟ್ಟ ಮಾತನ್ನೂ ಉಳಿಸಿಕೊಳ್ಳುವ ಬದ್ಧತೆ ಈ ಸರ್ಕಾರಕ್ಕಿಲ್ಲವೆ? pic.twitter.com/L9HAw3wcOB
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 6, 2022