ಬೆಂಗಳೂರು: ರಾಜ್ಯದಲ್ಲಿ 3000 ಹಿರಿಯ ಸಾಹಿತಿಗಳು ಹಾಗೂ ಕಲಾವಿದರಿಗೆ ಮಾಸಿಕ 2 ಸಾವಿರ ಮಾಸಾಶನವನ್ನು ಸೆಪ್ಟೆಂಬರ್ 1 ರಿಂದ ಅನ್ವಯವಾಗುವಂತೆ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹೌದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2018-19, 2019-20 ಮತ್ತು 2020-21ನೇ ಸಾಲಿನಲ್ಲಿ ಮಾಸಾಶನ ಕೋರಿ, ಸಾಹಿತಿಗಳು ಹಾಗೂ ಹಿರಿಯ ಕಲಾವಿದರು ಅರ್ಜಿ ಸಲ್ಲಿಸಿದ್ದರು. ಅದನ್ನು ಪರಿಶೀಲಿಸಿರುವ ರಾಜ್ಯ ಸರ್ಕಾರ, ಅರ್ಹರಾದ ಒಟ್ಟು 3000 ಮಂದಿ ಸಾಹಿತಿ ಹಾಗೂ ಕಲಾವಿದರಿಗೆ ತಿಂಗಳ ಮಾಸಾಶನ ನೀಡಲು ತೀರ್ಮಾನಿಸಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



