ಯಾದಗಿರಿ : ಮುಂದಿನ 10 ವರ್ಷಗಳನ್ನು ನೀರಾವರಿ ದಶಕ ಎಂದು ಘೋಷಿಸಲಾಗುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.
ಹೌದು, ಯಾದಗಿರಿಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರು, 10 ವರ್ಷಗಳಲ್ಲಿ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಾಗುತ್ತದೆ. ರಾಜ್ಯದಲ್ಲಿ 40.66 ಲಕ್ಷ ಹೆಕ್ಟೆರ್ ನೀರಾವರಿ ಪ್ರದೇಶದ ಗುರಿ ಇದ್ದು, ಈಗಾಗಲೇ 30 ಲಕ್ಷ ಹೆಕ್ಟೆರ್ಗೆ ನೀರುಣಿಸಲಾಗುತ್ತಿದೆ. ಬಾಕಿ 10 ಲಕ್ಷ ಹೆಕ್ಟೆರ್ಗೆ ನೀರಾವರಿ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.