ಕರುನಾಡಿನಲ್ಲಿಂದು ಮತ್ತೆ ಮೋದಿ ಮೇನಿಯಾ..! ಮಂಡ್ಯ ಗೆಲ್ಲಲು ರಣಕಹಳೆ; ಇಂದು ಏನೆಲ್ಲಾ ನಡೆಯಲಿದೆ..?

ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಕರುನಾಡಿನಲ್ಲಿಂದು ಮತ್ತೆ ಮೋದಿ ಮೇನಿಯಾ ನಡೆಯಲಿದೆ. ಹೌದು, ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಪ್ರಧಾನಿ ಮೋದಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಮೈಸೂರು-ಬೆಂಗಳೂರು…

Narendra Modi

ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಕರುನಾಡಿನಲ್ಲಿಂದು ಮತ್ತೆ ಮೋದಿ ಮೇನಿಯಾ ನಡೆಯಲಿದೆ.

ಹೌದು, ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಪ್ರಧಾನಿ ಮೋದಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯನ್ನು ಅದ್ಧೂರಿಯಾಗಿ ಲೋಕಾರ್ಪಣೆ ಮಾಡಲಿದ್ದಾರೆ.

ಆ ನಂತರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಮದ್ದೂರು ತಾಲೂಕಿನ ಗಜ್ಜಲಗೆರೆ ಬಳಿ ಬೃಹತ್ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇನ್ನು ಮೋದಿ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲಾಡಳಿತ ಭರದ ಸಿದ್ಧತೆ ನಡೆಸಿದೆ. ಗಜ್ಜಲೆಗೆರೆ ಬಳಿ ಕಾರ್ಯಕ್ರಮಕ್ಕಾಗಿ ಬೃಹತ್ ವೇದಿಕೆ ರೆಡಿಯಾಗ್ತಿದ್ದು ಕಾರ್ಯಕ್ರಮಕ್ಕೆ 2 ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇದೆ. ಸುಮಾರು 30 ಎಕರೆ ವಿಸ್ತೀರ್ಣದಲ್ಲಿ ಜರ್ಮನ್ ಟೆಂಟ್ ಹಾಕಲಾಗಿದ್ದು, 1 ಲಕ್ಷಕ್ಕೂ ಅಧಿಕ ಮಂದಿಗೆ ಆಸನ ವ್ಯವಸ್ಥೆ ಮಾಡಲಾಗಿದೆ.

Vijayaprabha Mobile App free

ಚುನಾವಣೆಯ ದೃಷ್ಟಿಯಿಂದ ಇಂದಿನ ಮೋದಿ ಭೇಟಿ ಭಾರೀ ಕುತೂಹಲ ಮೂಡಿಸಿದ್ದು, ಸದ್ಯ ಹಳೆ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಕೇಂದ್ರ ನಾಯಕರು ಪಣ ತೊಟ್ಟಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.