ರಾಜ್ಯದಲ್ಲಿ ಈ ವರ್ಷ ಅವಧಿಗೂ ಮುನ್ನವೇ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.
ಹೌದು, ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಮಾರ್ಚ್ 6ರಿಂದ 8ರ ನಡುವೆ ಅಕಾಲಿಕ ಮಳೆಯಾಗಿದ್ದು, ಬೆಳೆ ಹಾನಿಗೂ ಕಾರಣವಾಗಿದೆ. ದೇಶದ ಉತ್ತರ ಹಾಗೂ ಕೇಂದ್ರ ಭಾಗದಲ್ಲಿ ಮಾರ್ಚ್ 15ರ ತನಕ ಹಗುರವಾದ ಮಳೆಯಾಗಲಿದೆ.
ಇನ್ನು, ಮಾರ್ಚ್ 16ರಿಂದ 22ರ ತನಕ ದಕ್ಷಿಣ ಭಾರತದಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಜ್ಞರು ತಿಳಿಸಿದ್ದಾರೆ.