ಮತ ನೀಡಿ ಗೆಲ್ಲಿಸಿದ ಮತದಾರರೇ ಮೋದಿ ಅವರ ಜನ್ಮದಿನವನ್ನು ರಾಷ್ಟ್ರೀಯ ನಿರುದ್ಯೋಗ ದಿನವಾಗಿ ಆಚರಣೆ ಮಾಡಿದ್ದಾರೆ: ಸಿದ್ದರಾಮಯ್ಯ

Siddaramaih vijayaprabha Siddaramaih vijayaprabha

ಬೆಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯರಾದ ರಮೇಶ್ ಬಾಬು ಅವರು ಇಂದು ಕಾಂಗ್ರೆಸ್‌ಗೆ ಸೇರ್ಪಡೆಯಾದರು. ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರೊಂದಿಗೆ ರಮೇಶ್ ಬಾಬು ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು.

ಈ ಕುರಿತು ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, “ಕಾಂಗ್ರೆಸ್ ಪಕ್ಷ ರಾಜಕೀಯಕ್ಕಷ್ಟೇ ಸೀಮಿತವಲ್ಲ, ಇದೊಂದು ಚಳವಳಿ. ದೇಶದ ಸ್ವಾತಂತ್ರ್ಯಕ್ಕಾಗಿ ಆರಂಭಗೊಂಡ ಕಾಂಗ್ರೆಸ್‌ ಎಂಬ ಚಳವಳಿ ಇಂದು ಸಾಮಾಜಿಕ ನ್ಯಾಯ, ಸಮಾನತೆ, ಜಾತ್ಯಾತೀತತೆಯ ಸ್ಥಾಪನೆಗಾಗಿ ನಿರಂತರವಾಗಿದೆ. ಈ ಸಿದ್ಧಾಂತಗಳನ್ನು ಬೆಂಬಲಿಸುವ ಎಲ್ಲಾ ಮನಸ್ಸುಗಳು ಈ ವೇಳೆ ಒಂದಾಗಬೇಕು.

ದೇಶದ ಇತರ ಎಲ್ಲಾ ರಾಜಕೀಯ ಪಕ್ಷಗಳಿಗೂ ಕಾಂಗ್ರೆಸ್ ಮಾತೃಪಕ್ಷ. ಅದು ರಾಷ್ಟ್ರೀಯ ಪಕ್ಷವೇ ಆಗಿರಲಿ ಅಥವಾ ಪ್ರಾದೇಶಿಕ ಪಕ್ಷಗಳೇ ಆಗಿರಲಿ. ಅವು ಒಂದಲ್ಲಾ ಒಂದು ರೀತಿ ಕಾಂಗ್ರೆಸ್ ಪಕ್ಷದ ಮೂಲದಿಂದಲೇ ಅಸ್ತಿತ್ವಕ್ಕೆ ಬಂದಿವೆ. ಹಾಗಾಗಿಯೇ ದೇಶದ ಉದ್ದಗಲಕ್ಕೂ ಕಾರ್ಯಕರ್ತರನ್ನು ಹೊಂದಿರುವ ಏಕೈಕ ಪಕ್ಷವೆಂಬ ಹೆಗ್ಗಳಿಕೆ ನಮಗಿದೆ.

Advertisement

ನಾವಾಗಿಯೇ ಯಾರನ್ನು ನಮ್ಮ ಪಕ್ಷಕ್ಕೆ ಬನ್ನಿ ಎಂದು ಕೈಹಿಡಿದು ಎಳೆದುಕೊಂಡು ಬರೋದಿಲ್ಲ. ನಮ್ಮ ಪಕ್ಷದ ಸಿದ್ಧಾಂತಗಳನ್ನು, ಪಕ್ಷದ ನಾಯಕತ್ವವನ್ನು ಒಪ್ಪಿ ಬರುವವರಿಗೆ ಪಕ್ಷದ ಬಾಗಿಲು ಸದಾ ತೆರೆದಿರುತ್ತದೆ. ಸೈದ್ಧಾಂತಿಕ ಬದ್ಧತೆಯಿಲ್ಲದ ಅಧಿಕಾರದಾಹಿಗಳ ಅಗತ್ಯ ನಮ್ಮ ಪಕ್ಷಕ್ಕಿಲ್ಲ. ಅಂಥವರಿಂದ ಕಾಂಗ್ರೆಸ್ ದೂರವಿರಲಿದೆ.

ಮತ ನೀಡಿ ಗೆಲ್ಲಿಸಿದ ಮತದಾರರೇ ನೊಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ರಾಷ್ಟ್ರೀಯ ನಿರುದ್ಯೋಗ ದಿನವಾಗಿ ಆಚರಣೆ ಮಾಡಿದ್ದಾರೆ ಎಂದರೆ ರಾಷ್ಟ್ರದಲ್ಲಿ ಬಿಜೆಪಿ ಆಡಳಿತದ ಕೊನೆ ದಿನಗಳು ಸಮೀಪಿಸುತ್ತಿದೆ ಎಂದೇ ಅರ್ಥ. ಇಂಥಾ ಸಂದರ್ಭದಲ್ಲಿ ಗೌರವಯುತವಾಗಿ ಅವರೇ ರಾಜೀನಾಮೆ ನೀಡುವುದು ಉತ್ತಮ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ದೆಹಲಿಗೆ ಹೋಗಿ ನೆರೆಪರಿಹಾರ, ಜಿಎಸ್‌ಟಿ ಪರಿಹಾರ ಸೇರಿ ಹೆಚ್ಚಿನ‌ ಅನುದಾನ ಕೇಳಿ ತರುತ್ತಾರೆಂಬ ನಿರೀಕ್ಷೆಯಿತ್ತು, ಆದರೆ ಅನುದಾನ ನೀಡುವ ಬಗ್ಗೆ ಕೇಂದ್ರದ ಯಾವೊಬ್ಬ ಮಂತ್ರಿಯೂ ಈ ವರೆಗೆ ಮಾತನಾಡಿಲ್ಲ. ಹೀಗಾಗಿ ಕರ್ನಾಟಕ ಬಿಜೆಪಿ ಸರ್ಕಾರ ಸಾಲ ಮಾಡಿ ರಾಜ್ಯವನ್ನು ದಿವಾಳಿ ಮಾಡುವುದು ನಿಶ್ಚಿತ.

ಮಾರ್ಚ್ 9ರಂದು ರಾಜ್ಯದಲ್ಲಿ ಒಂದೇ ಒಂದು ಕೊರೊನಾ ಪ್ರಕರಣವಿತ್ತು, ಇಂದು 5 ಲಕ್ಷಕ್ಕಿಂತ ಹೆಚ್ಚು ಕೇಸ್ ದಾಖಲಾಗಿವೆ. ಆದರೂ ನಮ್ಮ ರಾಜ್ಯದ ಆರೋಗ್ಯ ಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರು ಕರ್ನಾಟಕ ಬೇರೆಲ್ಲಾ ರಾಜ್ಯಗಳಿಗಿಂತ ಬೆಟರ್ ಅಂತಿದಾರೆ. ಅಂದ್ರೆ ಅವರು ಇದಕ್ಕಿಂತ ಕೆಟ್ಟ ಪರಿಸ್ಥಿತಿ ನಿರೀಕ್ಷಿಸಿದ್ದರು ಅಂತನಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ಸರ್ಕಾರದ ವಿರುದ್ಧ ಟ್ವೀಟ್ ಮಾಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement