ದೀಪಾವಳಿ ವಿಶೇಷ: 31ರಂದು ಬೆಂಗಳೂರು-ಕಲಬುರಗಿ ಮಧ್ಯೆ ಸ್ಪೆಷಲ್ ಟ್ರೈನ್

Train canceled Train canceled

ಬೆಂಗಳೂರ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯು ಬೆಂಗಳೂರು-ಕಲಬುರಗಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸೇವೆ ಕಲ್ಪಿಸಿದೆ.

ಬೆಂಗಳೂರು-ಕಲಬುರಗಿ ವಿಶೇಷ ಎಕ್ಸ್‌ಪ್ರೆಸ್ ರೈಲು((06217) ಅ.31ರಂದು ಎಸ್‌ಎಂವಿಟಿ ಬೆಂಗಳೂರಿನಿಂದ ರಾತ್ರಿ 9.15ಕ್ಕೆ ಹೊರಟು ಮರುದಿನ ಬೆಳಗ್ಗೆ 7.40ಕ್ಕೆ ಕಲಬುರಗಿ ತಲುಪಲಿದೆ. ಹಿಂದಿರುಗುವ ರೈಲು (06218) ನ.1ರಂದು ಕಲಬುರಗಿಯಿಂದ ಬೆಳಗ್ಗೆ 9.35ಕ್ಕೆ ಹೊರಟು ಅದೇ ದಿನ ರಾತ್ರಿ 8 ಗಂಟೆಗೆ ಎಸ್‌ಎಂವಿಟಿ ಬೆಂಗಳೂರು ತಲುಪಲಿದೆ.

ಈ ರೈಲು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ ಮತ್ತು ಶಹಾಬಾದ್ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

Advertisement

ಯಶವಂತಪುರದಿಂದ ಅ. 29 ರಂದು ಸಂಜೆ 6:30ಕ್ಕೆ ಹೊರಡುವ ಯಶವಂತಪುರ-ಕೊಟ್ಟಾಯಂ ವಿಶೇಷ ಎಕ್ಸ್ ಪ್ರೆಸ್ ರೈಲು (06215) ಮರುದಿನ ಬೆಳಗ್ಗೆ 8:10ಕ್ಕೆ ಕೊಟ್ಟಾಯಂ ನಿಲ್ದಾಣ ತಲುಪಲಿದೆ. ಹಿಂದಿರುಗುವ ರೈಲು (06216) ಅ.30ರಂದು ಬೆಳಗ್ಗೆ 11.10ಕ್ಕೆ ಕೊಟ್ಟಾಯಂನಿಂದ ಹೊರಟು, ಮರುದಿನ ಅ.31ರಂದು ತಡರಾತ್ರಿ 1.15ಕ್ಕೆ ಯಶವಂತಪುರ ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲು ಕೃಷ್ಣರಾಜಪುರಂ, ವೈಟ್‌ಫೀಲ್ಡ್, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರ್, ಕೊಯಮತ್ತೂರು, ಪಾಲಕ್ಕಾಡ್, ತ್ರಿಶೂರ್, ಆಲುವಾ ಮತ್ತು ಎರ್ನಾಕುಲಂ ಟೌನ್ ನಿಲ್ದಾಣಗಳಲ್ಲಿ ನಿಲುಗಡೆ ಆಗಲಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

vijayaprabha news google news

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement
ಅಮ್ಮ ಎಂದರೆ ಕಿಚ್ಚನಿಗೆ ಕಣ್ಣಿಗೆ ಕಾಣುವ ದೇವರು!