Onion price | ವಿಜಯನಗರ ಜಿಲ್ಲೆಯಲ್ಲಿ ಈರುಳ್ಳಿ ಬೆಲೆ ಕುಸಿತವಾಗಿದ್ದು, ಕೆಜಿಗೆ ಕೇವಲ ಒಂದು ರೂಪಾಯಿಗೆ ಮಾರಾಟವಾಗುತ್ತಿದೆ. 50 ಕೆಜಿ ಚೀಲದ ಈರುಳ್ಳಿಗೆ 800 ರೂಗಿಂತ ಹೆಚ್ಚು ಖರ್ಚು ಮಾಡಿ ಬೆಳೆದ ರೈತರಿಗೆ ಕೇವಲ 50 ರೂ. ಮಾತ್ರ ಸಿಗುತ್ತಿದೆ.
ಈ ಬಾರಿ ಉತ್ತಮ ಫಸಲಿನಿಂದ ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದ ರೈತರಿಗೆ ಬೆಲೆ ಇಳಿಕೆಯಿಂದ ಆಘಾತ ಉಂಟಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಪ್ರತಿ ಚೀಲಕ್ಕೆ 1,600 ರಿಂದ ₹3450 ವರೆಗೆ ದರ ಸಿಕ್ಕಿತ್ತು. ಈ ಬಾರಿ ಕೆಜಿಗೆ ಕೇವಲ ಒಂದರಿಂದ 5 ರೂಪಾಯಿಗೆ ಇಳಿದಿದೆ.
ಡಿಸಿ ಕಚೇರಿ ಆವರಣದಲ್ಲಿ ಈರುಳ್ಳಿ ಸುರಿದು ರೈತರ ಆಕ್ರೋಶ
ಮಳೆ, ಬೆಲೆ ಕುಸಿತದಿಂದಾಗಿ ಈರುಳ್ಳಿಯನ್ನು ಕೇಳುವವರಿಲ್ಲದಂತಾಗಿದೆ. ಹೀಗಾಗಿ ಆಕ್ರೋಶಗೊಂಡ ರೈತರು ಈರುಳ್ಳಿಯನ್ನು DCಕಚೇರಿ ಆವರಣದಲ್ಲಿ ಸುರಿದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ರೈತರ ನಿರೀಕ್ಷೆಯಂತೆ, ಉತ್ತಮ ಬೆಳೆ ಬಂದರೂ ಲಾಭ ಸಿಗಲಾರದೇ ರೈತರು ದಿಕ್ಕು ತೋಚದಂತಾಗಿದ್ದಾರೆ. ರೈತರು ಬೆಳೆದಿರೋ ಈರುಳ್ಳಿಗೆ ಸರ್ಕಾರ ಕೂಡಲೇ ವೈಜ್ಞಾನಿಕವಾಗಿ ಬೆಂಬಲ ಬೆಲೆ ನಿಗದಿ ಪಡಿಸಬೇಕು. ಸರ್ಕಾರ ಪರಿಹಾರ ಒದಗಿಸುವ ಮೂಲಕ ಅನ್ನದಾತರನ್ನು ಸಂಕಷ್ಟದಿಂದ ಪಾರು ಮಾಡಬೇಕು. ಇಲ್ಲವಾದರೆ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.




