ಹಾಸನ: ದೇಶದಲ್ಲಿ ರೂಪಾಂತರ ಕರೋನ ವೈರಸ್ ಹಬ್ಬುತ್ತಿರುವ ಬೆನ್ನಲ್ಲೇ, ಕೊರೋನಾ ಸಂಕಷ್ಟ ಕಡಿಮೆಯಾಗೋದಕ್ಕೆ ಇನ್ನೂ 10 ವರ್ಷ ಬೇಕು ಎಂದು ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಇನ್ನು ರೂಪಾಂತರ ಕರೋನ ವೈರಸ್ ಬಗ್ಗೆ 2 ತಿಂಗಳ ಹಿಂದೆಯೇ ಭವಿಷ್ಯ ನುಡಿದಿದ್ದೆ ಎಂದು’ ಕೋಡಿ ಮಠದ ಶ್ರೀಗಳು ಹೇಳಿದ್ದಾರೆ.
ಹಾಸನದಲ್ಲಿ ಮಾತನಾಡಿದ ಕೋಡಿ ಮಠದ ಶ್ರೀಗಳು, ರಾಜ್ಯದಲ್ಲಿ ಪುನಃ ಅಕಾಲಿಕ ಮಳೆ, ಜಲ ಸಂಬಂಧಿ ಅನಾಹುತಗಳಾಗುವ ಸಾಧ್ಯತೆಗಳಿವೆ ಎಂದು ಭವಿಷ್ಯ ನುಡಿದಿದ್ದಾರೆ. ಇನ್ನು ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಗಳನ್ನು ನಿರೀಕ್ಷಿಸಬಹುದು ಎಂದಿರುವ ಶ್ರೀಗಳು, ರಾಜ್ಯ ಮಾತ್ರವಲ್ಲದೆ ದೇಶ, ಜಾಗತಿಕ ಮಟ್ಟದಲ್ಲೂ ಬದಲಾವಣೆಯಾಗಲಿದೆ ಎಂದು ಭವಿಷ್ಯ ನಡಿದಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.