ಬೆಂಗಳೂರು: ಬಿಎಸ್ ವೈ ಸರ್ಕಾರದಲ್ಲಿ ಆಡಳಿತ ಕುಸಿದು ಹೋಗಿದೆ ಭ್ರಷ್ಟಾಚಾರ ಹೆಚ್ಚಾಗಿದೆ, ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎಂದು ಬೆಂಗಳೂರಿನಲ್ಲಿ ವಿಪಕ್ಷನಾಯಕ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ.
ಐಪಿಎಸ್ ಅಧಿಕಾರಿಗಳು ಹಾದಿ ರಂಪ, ಬೀದಿ ರಂಪ ಮಾಡಿದ್ರು ಅವರನ್ನು ತಡೆಯುವ ಕೆಲಸವನ್ನು ಈ ಸರ್ಕಾರ ಮಾಡ್ತಾ? ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಅರೋಗ್ಯ ಸಚಿವರು ಒಂದು ರೀತಿ ಹೇಳಿಕೆ ನೀಡುತ್ತಾರೆ. ಗೃಹ ಸಚಿವರು ಒಂದು ರೀತಿ ಹೇಳಿಕೆ ಕೊಡುತ್ತಾರೆ, ಮುಖ್ಯಮಂತ್ರಿ ಮತ್ತೊಂದು ರೀತಿ ಹೇಳಿಕೆ ನೀಡುತ್ತಾರೆ ಎಂದು ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ
ಏರ್ ಪೋರ್ಟ್ ಗೆ ಬಂದವರು ಕದ್ದು ಓಡಿ ಹೋಗಲಾಗುತ್ತಾ? ಏರ್ ಪೋರ್ಟ್ ನಲ್ಲಿ ತಪಾಸಣೆ ಮಾಡಬಹುದಿತ್ತಲ್ವಾ ? ಏರ್ ಪೋರ್ಟ್ ನಿಂದ ಬಂದವರು ಮಿಸ್ ಆಗಿದ್ದರೆಂದ್ರೆನು? ಇದು ಅವರ ಅರಾಜಕತೆ, ಬೇಜವಾಬ್ದಾರಿ ತೋರಿಸುತ್ತದೆ. ಕರೋನ ನ್ಯಾಚುರಲ್ ಆಗಿ ಕಡಿಮೆಯಾಗಿದೆ ಅಷ್ಟೇ ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ