BIG NEWS: ರಾಜ್ಯ ಸರ್ಕಾರದಿಂದ ಸಾರಿಗೆ ನೌಕರರಿಗೆ ಸಿಹಿ ಸುದ್ದಿ; ಬಸ್ ಪಾಸ್ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಬಿಗ್ ಶಾಕ್!

ksrtc student bus pass vijayaprabha ksrtc student bus pass vijayaprabha

ಬೆಂಗಳೂರು: ಕಳೆದ ಒಂದು ತಿಂಗಳಿಂದ ಸಂಕಷ್ಟದಲ್ಲಿದ್ದ ಬಿಎಂಟಿಸಿ, ಕೆ ಎಸ್ ಆರ್ ಟಿ ಸಿ ಸೇರಿದಂತೆ ಸಾರಿಗೆ ಸಂಸ್ಥೆಗಳ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ.

ಹೌದು, ರಾಜ್ಯ ಸರ್ಕಾರದಿಂದ ಸಾರಿಗೆ ನೌಕರರಿಗೆ 325 ಕೋಟಿ ರೂಪಾಯಿ ವೇತನ ಬಿಡುಗಡೆ ಮಾಡಲಾಗಿದ್ದು, ಇನ್ನು ಇದರಲ್ಲಿ ಏಪ್ರಿಲ್ ತಿಂಗಳಲ್ಲಿ ಶೇಕಡಾ 25 ರಷ್ಟು ಮತ್ತು ಮೇ ತಿಂಗಳಲ್ಲಿ ಶೇಕಡಾ 75 ರಷ್ಟು ವೇತನ ಬಿಡುಗಡೆ ಮಾಡಲಾಗಿದ್ದು, ಉಳಿದ ಮೊತ್ತವನ್ನು ನಿಗಮಗಳ ಸ್ವಂತ ಸಂಪನ್ಮೂಲಗಳನ್ನು ಕ್ರೂಡೀಕರಿಸಿ ನೌಕರರಿಗೆ ಪಾವತಿಸುವಂತೆ ತಿಳಿಸಲಾಗಿದೆ.

ಇನ್ನು, ವೇತನ ವೆಚ್ಚಕ್ಕಾಗಿ ಪ್ರಸಕ್ತ ಸಾಲಿಗೆ ಶಾಲಾ-ಕಾಲೇಜುಗಳು ಆರಂಭವಾದಲ್ಲಿ ಉಚಿತ ಅಥವಾ ರಿಯಾಯಿತಿ ಪಾಸನ್ನು ವಿತರಿಸಿದರೆ ಈ ವೆಚ್ಚವನ್ನು ಸಂಸ್ಥೆ ಇಲ್ಲವೇ ವಿದ್ಯಾರ್ಥಿಗಳಿಂದಲೇ ಭರಿಸಬೇಕು ಎಂದು ಹೇಳಲಾಗಿದೆ.

Advertisement

ಹೌದು, ಸರ್ಕಾರದಿಂದ ಯಾವುದೇ ಸಹಾಯಧನ ನೀಡುವುದಿಲ್ಲ ಎನ್ನಲಾಗಿದ್ದು, ಇತರೆ ಬಸ್ ಪಾಸ್ ರಿಯಾಯಿತಿ ಕೂಡ ಈ ಸಾಲಿನಲ್ಲಿ ಲಭ್ಯವಿರುವುದಿಲ್ಲ ಎನ್ನಲಾಗಿದೆ. ಪ್ರವಾಹ, ಕರೋನದಂತಹ ಹೊಡೆತಗಳಿಂದ ಮೇಲಿಂದ ಮೇಲೆ ಸಂಕಷ್ಟಗಳನ್ನು ಎದುರಿಸುತ್ತಿರುವ ಸರ್ಕಾರ ಆರ್ಥಿಕ ನಷ್ಟದಲ್ಲಿದೆ ಎನ್ನಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement