ಬೆಂಗಳೂರು: ಕಳೆದ ಒಂದು ತಿಂಗಳಿಂದ ಸಂಕಷ್ಟದಲ್ಲಿದ್ದ ಬಿಎಂಟಿಸಿ, ಕೆ ಎಸ್ ಆರ್ ಟಿ ಸಿ ಸೇರಿದಂತೆ ಸಾರಿಗೆ ಸಂಸ್ಥೆಗಳ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ.
ಹೌದು, ರಾಜ್ಯ ಸರ್ಕಾರದಿಂದ ಸಾರಿಗೆ ನೌಕರರಿಗೆ 325 ಕೋಟಿ ರೂಪಾಯಿ ವೇತನ ಬಿಡುಗಡೆ ಮಾಡಲಾಗಿದ್ದು, ಇನ್ನು ಇದರಲ್ಲಿ ಏಪ್ರಿಲ್ ತಿಂಗಳಲ್ಲಿ ಶೇಕಡಾ 25 ರಷ್ಟು ಮತ್ತು ಮೇ ತಿಂಗಳಲ್ಲಿ ಶೇಕಡಾ 75 ರಷ್ಟು ವೇತನ ಬಿಡುಗಡೆ ಮಾಡಲಾಗಿದ್ದು, ಉಳಿದ ಮೊತ್ತವನ್ನು ನಿಗಮಗಳ ಸ್ವಂತ ಸಂಪನ್ಮೂಲಗಳನ್ನು ಕ್ರೂಡೀಕರಿಸಿ ನೌಕರರಿಗೆ ಪಾವತಿಸುವಂತೆ ತಿಳಿಸಲಾಗಿದೆ.
ಇನ್ನು, ವೇತನ ವೆಚ್ಚಕ್ಕಾಗಿ ಪ್ರಸಕ್ತ ಸಾಲಿಗೆ ಶಾಲಾ-ಕಾಲೇಜುಗಳು ಆರಂಭವಾದಲ್ಲಿ ಉಚಿತ ಅಥವಾ ರಿಯಾಯಿತಿ ಪಾಸನ್ನು ವಿತರಿಸಿದರೆ ಈ ವೆಚ್ಚವನ್ನು ಸಂಸ್ಥೆ ಇಲ್ಲವೇ ವಿದ್ಯಾರ್ಥಿಗಳಿಂದಲೇ ಭರಿಸಬೇಕು ಎಂದು ಹೇಳಲಾಗಿದೆ.
ಹೌದು, ಸರ್ಕಾರದಿಂದ ಯಾವುದೇ ಸಹಾಯಧನ ನೀಡುವುದಿಲ್ಲ ಎನ್ನಲಾಗಿದ್ದು, ಇತರೆ ಬಸ್ ಪಾಸ್ ರಿಯಾಯಿತಿ ಕೂಡ ಈ ಸಾಲಿನಲ್ಲಿ ಲಭ್ಯವಿರುವುದಿಲ್ಲ ಎನ್ನಲಾಗಿದೆ. ಪ್ರವಾಹ, ಕರೋನದಂತಹ ಹೊಡೆತಗಳಿಂದ ಮೇಲಿಂದ ಮೇಲೆ ಸಂಕಷ್ಟಗಳನ್ನು ಎದುರಿಸುತ್ತಿರುವ ಸರ್ಕಾರ ಆರ್ಥಿಕ ನಷ್ಟದಲ್ಲಿದೆ ಎನ್ನಲಾಗಿದೆ.