ಬೆಂಗಳೂರು: ಪ್ರಸಕ್ತ ಸಾಲಿನ SSLC ಪರೀಕ್ಷೆಯನ್ನು ಕರೋನ ಎರಡನೇ ಅಲೆ ಹಿನ್ನಲೆ, ಸುರಕ್ಷಿತವಾಗಿ ನಡೆಸಲು ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಹೇಳಿದ್ದಾರೆ.
ಹೌದು, ಬಿಇಒಗಳ ಜೊತೆ ವಿಡಿಯೋ ಸಂವಾದದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು, ಜುಲೈ 15 ಮತ್ತು 17ರಂದು ಆಯಾ ಪರೀಕ್ಷೆ ಕೇಂದ್ರಗಳಲ್ಲಿ ಅಣಕು ಪರೀಕ್ಷೆ ನಡೆಸಬೇಕು. ಜೊತೆಗೆ ಪರೀಕ್ಷೆ ಕೇಂದ್ರದಲ್ಲಿ ಮಕ್ಕಳು ಭೌತಿಕ ಅಂತರ ಕಾಪಾಡಿಕೊಳ್ಳುವಂತೆ ನಿಗಾವಹಿಸಬೇಕು ಎಂದು ಸಲಹೆ ನೀಡಿದ್ದಾರೆ.
ಇನ್ನು, ರಾಜ್ಯದಲ್ಲಿ ಕರೋನ ಹಿನ್ನಲೆ SSLC ಪರೀಕ್ಷೆ ಇದೇ ತಿಂಗಳು 19 ಮತ್ತು 22ರಂದು ಎರಡು ಹಂತದಲ್ಲಿ ಪರೀಕ್ಷೆ ನಡೆಯಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.