ಬೆಂಗಳೂರು: ಬೆಂಗಳೂರಿನ ದೇವರಚಿಕ್ಕನಹಳ್ಳಿಯಲ್ಲಿ ಆಶ್ರಿತ್ ಅಪಾರ್ಟ್ಮೆಂಟ್ನಲ್ಲಿ ಸಿಲಿಂಡರ್ ಸ್ಫೋಟಿಸಿ ಬೆಂಕಿ ಅವಘಡ ಸಂಭವಿಸಿದ್ದು, 3 ಫ್ಲೋರ್ ಗೆ ಬೆಂಕಿ ವ್ಯಾಪಿಸಿದ್ದು, ದುರಂತದಲ್ಲಿ ಇಬ್ಬರು ಸಜೀವದಹನವಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಓರ್ವರು ಮಾಹಿತಿ ನೀಡಿದ್ದಾರೆ.
ದೇವರಚಿಕ್ಕನಹಳ್ಳಿಯಲ್ಲಿ ಆಶ್ರಿತ್ ಅಪಾರ್ಟ್ಮೆಂಟ್ನಲ್ಲಿ ಫ್ಲ್ಯಾಟ್ನಲ್ಲಿದ್ದ ಮೂವರು ಹೊರಬಂದು ಪಾರಾಗಿದ್ದಾರೆ. ಫ್ಲ್ಯಾಟ್ನಲ್ಲಿದ್ದ ಐವರ ಪೈಕಿ ಇಬ್ಬರು ಸಜೀವದಹನವಾಗಿದ್ದು, ಉಳಿದವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಅಗ್ನಿಶಾಮಕ ಸಿಬ್ಬಂದಿ, ಪೊಲೀಸರಿಂದ ರಕ್ಷಣಾ ಕಾರ್ಯ ಸಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



