ಮೇಕೆದಾಟು ಪಾದಯಾತ್ರೆ ತಡೆಯಲೆಂದೇ ಸರ್ಕಾರ ನೈಟ್ ಕರ್ಫ್ಯೂ ಹೇರಿತು: ರಾಮಲಿಂಗಾ ರೆಡ್ಡಿ

ramalinga reddy vijayaprabha news ramalinga reddy vijayaprabha news

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಕೋಲ್ಡ್ ವಾರ್ ನಡೆಯುತ್ತಿಲ್ಲ. ಶೀತಲ ಸಮರ ನಡೆಯುತ್ತಿರುವುದು ಬಿಜೆಪಿ ಪಕ್ಷದಲ್ಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರೇಣುಕಾಚಾರ್ಯ ಅವರ ಮಾತುಗಳಿಂದ ಅರ್ಥವಾಗುವುದಿಲ್ಲವೇ? ಕಾಂಗ್ರೆಸ್ ಪಕ್ಷಕ್ಕೆ ಯಾರೆಲ್ಲಾ ಬರುತ್ತಾರೋ ಗೊತ್ತಿಲ್ಲ. ಆದರೆ ಪಕ್ಷಕ್ಕೆ ಬನ್ನಿ ಎಂದು ನಾನು ಯಾರನ್ನೂ ಆಹ್ವಾನಿಸುವುದಿಲ್ಲ ಎಂದಿದ್ದಾರೆ.

ಕೋವಿಡ್ ಮೃತರ ಕುಟುಂಬಗಳಿಗೆ ಪರಿಹಾರ ಸಿಕ್ಕಿಲ್ಲ: ರೆಡ್ಡಿ

Advertisement

ಇನ್ನು, ಸರ್ಕಾರವೇ ನೀಡಿರುವ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಕೋವಿಡ್ ಬಲಿಯಾದ ಒಟ್ಟು ಮಂದಿಯ ಪೈಕಿ ಶೇ.7ರಷ್ಟು ಕುಟುಂಬಸ್ಥರಿಗೆ ಮಾತ್ರವೇ ಪರಿಹಾರ ನೀಡಲಾಗಿದೆ ಎಂದು ಕಾಂಗ್ರೆಸ್ ಶಾಸಕ ರಾಮಲಿಂಗಾ ರೆಡ್ಡಿ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ 1.5 ಲಕ್ಷ ಹಾಗೂ ರಾಜ್ಯದ ಇತರೆಡೆ 1.5 ಲಕ್ಷ ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ. ಅವರಿಗೆ ವೈದ್ಯಕೀಯ ಕಿಟ್ ವಿತರಿಸಿಲ್ಲ. ಕಾಂಗ್ರೆಸ್ ಪಕ್ಷದ ಮೇಕೆದಾಟು ಪಾದಯಾತ್ರೆಯನ್ನು ತಡೆಯಲೆಂದೇ ಸರ್ಕಾರ ನೈಟ್ ಕರ್ಫ್ಯೂ ಹೇರಿತು ಎಂದು ರಾಮಲಿಂಗಾ ರೆಡ್ಡಿ ಆರೋಪಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement