ವಿದ್ಯಾರ್ಥಿಗಳೆ ಗಮನಿಸಿ: ನಿಮ್ಮ ಖಾತೆಗೆ ₹30000..!; ಅರ್ಜಿ ಸಲ್ಲಿಸಲು ಫೆ.28 ಕಡೆ ದಿನ

ಸಮಾಜ ಕಲ್ಯಾಣ ಇಲಾಖೆಯು ಮೊದಲ ಬಾರಿಗೆ ಪ್ರಥಮ ದರ್ಜೆಯಲ್ಲಿ ವಿವಿಧ ಕೋರ್ಸ್ ಉತ್ತೀರ್ಣರಾದವರಿಗೆ ನೀಡುವ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಮತೊಮ್ಮೆ ವಿಸ್ತರಿಸಿದೆ. ಆಸಕ್ತ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಫೆ.28…

scholarship vijayaprabha

ಸಮಾಜ ಕಲ್ಯಾಣ ಇಲಾಖೆಯು ಮೊದಲ ಬಾರಿಗೆ ಪ್ರಥಮ ದರ್ಜೆಯಲ್ಲಿ ವಿವಿಧ ಕೋರ್ಸ್ ಉತ್ತೀರ್ಣರಾದವರಿಗೆ ನೀಡುವ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಮತೊಮ್ಮೆ ವಿಸ್ತರಿಸಿದೆ. ಆಸಕ್ತ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಫೆ.28 ಕಡೆ ದಿನ ಆಗಿದೆ.

ಪಿಯುಸಿ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ₹20000, ಪದವಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ₹25000, ಸ್ನಾತಕೋತ್ತರ ಪದವಿ ₹30000, ಕೃಷಿ, ಇಂಜಿನಿಯರಿಂಗ್, ವೆಟರ್ನರಿ, ಮೆಡಿಸಿನ್ ವಿದ್ಯಾರ್ಥಿಗಳಿಗೆ ₹35000 ಪ್ರೋತ್ಸಾಹಧನ ನೀಡಲಾಗುತ್ತದೆ.

ಆಸಕ್ತ ವಿದ್ಯಾರ್ಥಿಗಳು https://sw.kar.nic.in/swprizemoney/Home.aspx?ReturnUrl=%2fswprizemoney%2f ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

Vijayaprabha Mobile App free

ಶುಲ್ಕ ವಿನಾಯಿತಿ, ವಿದ್ಯಾಸಿರಿ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ:

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್‌ ನಂತರ ಮೆಟ್ರಿಕ್‌ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಿದೆ.

ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು & ಪ್ರವರ್ಗ-1, ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಫೆ.28 ಕಡೆ ದಿನ ಆಗಿದೆ. ಸೌಲಭ್ಯ ವಿವರ, ಅರ್ಹತೆ, ಸೇರಿದಂತೆ ಹೆಚ್ಚಿನ ಮಾಹಿತಿಗೆ www.bcwd.karnataka.gov.inಗೆ ಸಂಪರ್ಕಿಸಬಹುದು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.