ರೈತರಿಗೆ ಸಿಹಿಸುದ್ದಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ

ದಾವಣಗೆರೆ ಫೆ.09 : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2021-22ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಗಾಗಿ ಹಿಂದುಳಿದ ವರ್ಗಗಳ ಜನರಿಂದ ಅರ್ಜಿ ಆಹ್ವಾನಿಸಿದೆ. ನಿಗಮದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಆಯವ್ಯಯದಲ್ಲಿ ಒದಗಿಸಿದ ಅನುದಾನದಿಂದ…

Ganga welfare project

ದಾವಣಗೆರೆ ಫೆ.09 : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2021-22ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಗಾಗಿ ಹಿಂದುಳಿದ ವರ್ಗಗಳ ಜನರಿಂದ ಅರ್ಜಿ ಆಹ್ವಾನಿಸಿದೆ.

ನಿಗಮದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಆಯವ್ಯಯದಲ್ಲಿ ಒದಗಿಸಿದ ಅನುದಾನದಿಂದ ಹಿಂದುಳಿದ ವರ್ಗಗಳ ಜನರಿಗೆ ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಒದಗಿಸಲು ಕ್ರಿಯಾ ಯೋಜನೆ ರೂಪಿಸಲಾಗಿರುತ್ತದೆ. ಈ ಸಾಲಿನಲ್ಲಿ ರಾಜ್ಯ ಸರ್ಕಾರ ಒದಗಿಸಿದ ಅನುದಾನದಿಂದ ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಬಯಸುವ ಹಿಂದುಳಿದ ವರ್ಗಗಳ ಜನರಿಂದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ/ಅರೆ ಅಲೆಮಾರಿ, ಒಕ್ಕಲಿಗ, ಲಿಂಗಾಯುತ, ಕಾಡುಗೊಲ್ಲ, ಹಟ್ಟಿ ಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಅರ್ಜಿ ಆಹ್ವಾನಿಸಲಾಗಿದೆ.

ಹಿಂದುಳಿದ ವರ್ಗಗಳ ಅರ್ಜಿದಾರರು ಗಂಗಾ ಕಲ್ಯಾಣ ಯೋಜನೆಗೆ ಫೆ.14 ರಿಂದ ಉಚಿತವಾಗಿ ಅರ್ಜಿ ನಮೂನೆಯನ್ನು ನಿಗಮದ ಜಿಲ್ಲಾ ಕಛೇರಿಯಿಂದ ಪಡೆದು ಮಾ.07 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ನಿಗದಿತ ದಿನಾಂಕದ ನಂತರ ಬರುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.

Vijayaprabha Mobile App free

ಅರ್ಜಿದಾರರು 18 ವರ್ಷ ಮೇಲ್ಪಟ್ಟು ಹಾಗೂ 55 ವರ್ಷ ಗರಿಷ್ಠ ವಯೋಮಿತಿಯ ಒಳಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 40,000ದ ಒಳಗಿರಬೇಕು. ಪಾಸ್‍ಪೋರ್ಟ್ ಅಳತೆಯ 2 ಭಾವಚಿತ್ರ. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ (5 ವರ್ಷಗಳ ಅವಧಿ ಒಳಗಿರಬೇಕು, ಸಣ್ಣ ಮತ್ತು ಅತೀ ಸಣ್ಣ ರೈತರಾಗಿರಬೇಕು. (ಕನಿಷ್ಠ 02 ಎಕರೆ ಗರಿಷ್ಟ 05 ಎಕರೆ ಜಮೀನನ್ನು ಹೊಂದಿರಬೇಕು) ಈ ಬಗ್ಗೆ ಸಂಬಂಧಿಸಿದ ತಹಶಿಲ್ದಾರ್/ಕಂದಾಯ ಅಧಿಕಾರಿಗಳಿಂದ ಪಡೆದ ದೃಢೀಕೃತ ಪ್ರಮಾಣ ಪತ್ರವನ್ನು ಲಗತ್ತಿಸಬೇಕು. ವಿಳಾಸ ದೃಢೀಕರಣ/ಪಡಿತರ ಚೀಟಿ/ಚುನಾವಣಾ ಗುರುತಿನ ಚೀಟಿ/ಕೆ.ಪಿ.ಟಿ.ಸಿ.ಎಲ್. ಆರ್.ಆರ್. ನಂ. ಇರುವ ಬಿಲ್ಲಿನ ಜೆರಾಕ್ಸ್ ಪ್ರತಿ/ಆಧಾರ ಕಾರ್ಡ್‍ನ ಜೆರಾಕ್ಸ್ ಪ್ರತಿ ಲಗತ್ತಿಸಬೇಕು. ಅರ್ಜಿದಾರರು ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.ಅರ್ಜಿ ನಮೂನೆಗಳನ್ನು ನಿಗಮದ ವೆಬ್‍ಸೈಟ್‍ನಲ್ಲಿ ಹಾಗೂ ಉಚಿತವಾಗಿ ನಿಗಮದ ಜಿಲ್ಲಾ ಕಛೇರಿಯಲ್ಲಿ ಪಡೆಯಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ನಿಗಮದ ವೆಬ್‍ಸೈಟ್ www.dbcdc.karnataka.gov.in ಹಾಗೂ ಕಛೇರಿ ದೂರವಾಣಿ ಸಂಖ್ಯೆ 08192-230934 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ದಾವಣಗೆರೆ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.