ಬೆಂಗಳೂರು: ಬಜರಂಗ ದಳ ಕಾರ್ಯಕರ್ತನ ಹತ್ಯೆ ಪ್ರಕರಣ ಸಂಬಂಧ ಕಂದಾಯ ಸಚಿವ ಆರ್. ಅಶೋಕ್ ಅವರು ಪ್ರತಿಕ್ರಿಯೆ ನೀಡಿದ್ದು, ಈ ಘಟನೆ ನಡೆದಿರುವುದು ಬಹಳ ನೋವಿನ ಸಂಗತಿ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್ ಅವರು, ಹಿಜಾಬ್ ವಿವಾದ ಹಾಗೂ ಶಿವಮೊಗ್ಗ ಗಲಭೆಗೆ ಸಂಬಂಧವಿದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಇಂಥವರನ್ನು ಮಟ್ಟಹಾಕಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನು, ಬಜರಂಗ ದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.