ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ರಾಮನಗರ: ರಾಮನಗರದ ಬೈರವನದೊಡ್ಡಿ ಸಮೀಪದ ತೋಟದ ಮನೆಯಲ್ಲಿ ಕಾಂಗ್ರೆಸ್ ಮುಖಂಡ ಗಂಟಪ್ಪ (60) ಎಂಬುವವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹೌದು, ಗಂಟಪ್ಪ ಬಾನಂದೂರು ನಿವಾಸಿಯಾಗಿದ್ದು, ತಮ್ಮ ತೋಟದಲ್ಲಿ ಬೈಕ್ ಸರ್ವಿಸ್ ಸ್ಟೇಷನ್ ನಡೆಸುತ್ತಿದ್ದರು.…

ರಾಮನಗರ: ರಾಮನಗರದ ಬೈರವನದೊಡ್ಡಿ ಸಮೀಪದ ತೋಟದ ಮನೆಯಲ್ಲಿ ಕಾಂಗ್ರೆಸ್ ಮುಖಂಡ ಗಂಟಪ್ಪ (60) ಎಂಬುವವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಹೌದು, ಗಂಟಪ್ಪ ಬಾನಂದೂರು ನಿವಾಸಿಯಾಗಿದ್ದು, ತಮ್ಮ ತೋಟದಲ್ಲಿ ಬೈಕ್ ಸರ್ವಿಸ್ ಸ್ಟೇಷನ್ ನಡೆಸುತ್ತಿದ್ದರು. ನಿನ್ನೆ ರಾತ್ರಿ ಅಲ್ಲಿಯೇ ಉಳಿದುಕೊಂಡಿದ್ದರು. ಈ ವೇಳೆ ದುಷ್ಕರ್ಮಿಗಳು ಹೊಂಚು ಹಾಕಿ ಗಂಟಪ್ಪರ ಹೊಟ್ಟೆ ಮತ್ತು ಕುತ್ತಿಗೆಗೆ ಬರ್ಬರವಾಗಿ ಇರಿದು ಹತ್ಯೆ ಮಾಡಿ ಪರಾರಿ ಆಗಿದ್ದಾರೆ.

ಇನ್ನು, ಜಮೀನು ವಿವಾದಕ್ಕೆ ಸಂಬಂಧಿಸಿ ಕಾಂಗ್ರೆಸ್ ಮುಖಂಡ ಗಂಟಪ್ಪ ಅವರ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.