ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ಬೆಸ್ಕಾಂ(BESCOM) ಇಂಜಿನಿಯರ್ ಕಡತ ವಿಲೇವಾರಿಗಾಗಿ 15 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಹೌದು, ಹರಿಹರ ಬೆಸ್ಕಾಂ ಕಚೇರಿಯ ಸಹಾಯಕ ಕಾರ್ಯಪಡೆ ಇಂಜಿನಿಯರ್ ಬಿ.ಎಂ.ಕರಿಬಸವಯ್ಯ ಅವರು ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದು, ಕಡತ ವಿಲೇವಾರಿಗಾಗಿ ಕೆಇಬಿ ಗುತ್ತಿಗೆದಾರ ಬೇವಿನಹಳ್ಳಿ ಮಹೇಶ್ವರಪ್ಪ ಎಂಬುವರ ಬಳಿ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಈಗಾಗಲೇ 9 ಸಾವಿರ ರೂಪಾಯಿ ಪಡೆದುಕೊಂಡಿದ್ದ ಬೆಸ್ಕಾಂ ಇಂಜಿನಿಯರ್ ಕರಿಬಸವಯ್ಯ ಅವರು, ಇಂದು ಬೆಸ್ಕಾಂ ಕಚೇರಿಯಲ್ಲಿ ಬಾಕಿ 6 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತಗೆ ಸಿಕ್ಕಿ ಬಿದ್ದಿದ್ದಾರೆ. ಲೋಕಾಯುಕ್ತ ಎಸ್ ಪಿ ಕೌಲಾಪುರೆ ದಾಳಿ ನಡೆಸಿದ್ದು, ಬೆಸ್ಕಾಂ ಇಂಜಿನಿಯರ್ ಕರಿಬಸವಯ್ಯ ಅವರನ್ನು ವಶಕ್ಕೆ ಪಡೆದಿದು ವಿಚಾರಣೆ ನಡೆಸುತ್ತಿದ್ದಾರೆ.