ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಸೇರಿದ ಕಾರೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಹೂವಮ್ಮ(55) ಎಂಬ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪುತ್ರ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಇಂದು ನಡೆದಿದೆ.
ಹೌದು, ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಸೇರಿದ ಕಾರೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದ್ದು, ಈ ಅಪಘಾತವು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹನುಮಂತನಗರದ ಬಳಿ ನಡೆದಿದ್ದು, ಚಾಲಕ ಪಾನಮತ್ತನಾಗಿ ಕಾರು ಚಲಾಯಿಸಿದ್ದಾನೆ ಎಂದು ಹೇಳಲಾಗಿದೆ.
ಇನ್ನು ಅಪಘಾತದ ವೇಳೆ ಕಾರಿನಲ್ಲಿ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಇರಲಿಲ್ಲ ಎಂದು ಹೇಳಲಾಗಿದ್ದು, ಕಾರಿನ ದುರಸ್ತಿಗಾಗಿ ಚಾಲಕ ಬೆಂಗಳೂರಿಗೆ ಬರುತ್ತಿದ್ದ ಎನ್ನಲಾಗಿದೆ.