Chiranjeevi: ಬೆಂಗಳೂರು ನೀರಿನ ಸಮಸ್ಯೆ; ಕನ್ನಡದಲ್ಲಿ ಟ್ವೀಟ್​ ಮಾಡಿ ಪರಿಹಾರ ತಿಳಿಸಿದ ಮೆಗಾ ಸ್ಟಾರ್​

Chiranjeevi: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ತೊಂದರೆ ಆಗಿದೆ. ಇಂಥ ಸಂದರ್ಭದಲ್ಲಿ ನೀರು ಪೋಲು ಮಾಡುವವರಿಗೆ ದಂಡ ಹಾಕಲಾಗುತ್ತಿದೆ. ಈಗ ತೆಲುಗು ಚಿತ್ರರಂಗದ ಜನಪ್ರಿಯ ನಟ ‘ಮೆಗಾ ಸ್ಟಾರ್’ ಚಿರಂಜೀವಿ ಅವರು ಈ ಸಮಸ್ಯೆಗೆ ಪರಿಹಾರ ಸೂಚಿಸಿದ್ದಾರೆ.

Vijayaprabha

Chiranjeevi: ಅನ್ನ ತಿನ್ನದೆ ಬದುಕಬಹುದು ಆದರೆ ನೀರು ಕುಡಿಯದೆ ಬದುಕಲು ಸಾಧ್ಯವಿಲ್ಲ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಬೆಂಗಳೂರಿನ ನೀರಿನ ಸಮಸ್ಯೆ ಈಗ ಎಲ್ಲರಿಗೂ ಗೊತ್ತಿದೆ. ಬೆಂಗಳೂರಿನ ನೀರಿನ ಸಮಸ್ಯೆ ಐಟಿ ಉದ್ಯೋಗಿಗಳಿಗೆ ದೊಡ್ಡ ಸಮಸ್ಯೆಯಾಗಿದೆ. ಈಗ ತೆಲುಗು ಚಿತ್ರರಂಗದ ಜನಪ್ರಿಯ ನಟ ‘ಮೆಗಾ ಸ್ಟಾರ್’ ಚಿರಂಜೀವಿ (Chiranjeevi) ಅವರು ಈ ಸಮಸ್ಯೆಗೆ ಪರಿಹಾರ ಸೂಚಿಸಿದ್ದಾರೆ.

ಇದನ್ನು ಓದಿ: 2 ಉಚಿತ ಗ್ಯಾಸ್ ಸಿಲೆಂಡ‌ರ್; ಯಾರಿಗೆ ಸಿಗುತ್ತೆ? ಅರ್ಜಿ ಸಲ್ಲಿಸುವುದು ಹೇಗೆ?

ಕನ್ನಡದಲ್ಲಿಯೇ ಟ್ವೀಟ್​ ಮಾಡಿದ ಮೆಗಾ ಸ್ಟಾರ್​

Chiranjeevi tweets Bengaluru water crisis

ವಿಶೇಷ ಏನೆಂದರೆ ಟಾಲಿವುಡ್ ಮೆಗಾ ಸ್ಟಾರ್ ಚಿರಂಜೀವಿ ಅವರು ಕನ್ನಡದಲ್ಲಿಯೇ ಪೋಸ್ಟ್​ ಮಾಡುವ ಮೂಲಕ ಕಾಳಜಿ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ತಮ್ಮ ಫಾರ್ಮ್​ ಹೌಸ್​ನಲ್ಲಿ ಅಳವಡಿಸಿದ ಕ್ರಮವನ್ನು ಅವರು ಜನರಿಗೆ ತಿಳಿಸಿದ್ದಾರೆ.

ಇದನ್ನು ಓದಿ: ಗೃಹಲಕ್ಷ್ಮೀ ಯೋಜನೆಯ 2,000 ರೂ; ಈಗಲೂ ಅರ್ಜಿ ಸಲ್ಲಿಸಬಹುದೇ?

ಹೌದು, ನಮಗೆಲ್ಲರಿಗೂ ತಿಳಿದಿರುವಂತೆ, ನೀರು ಅತ್ಯಂತ ಅಮೂಲ್ಯವಾದ ವಸ್ತುವಾಗಿದೆ. ನೀರಿನ ಕೊರತೆಯಿಂದ ದೈನಂದಿನ ಜೀವನ ದುಸ್ತರವಾಗಿದೆ. ಬೆಂಗಳೂರಿನಲ್ಲಿ ಇಂದು ನೀರಿನ ಕೊರತೆ ಎದುರಾಗಿದ್ದು, ನಾಳೆ ಎಲ್ಲಿ ಬೇಕಾದರೂ ಈ ಸಮಸ್ಯೆ ಎದುರಾಗಬಹುದು. ಹಾಗಾಗಿ ನೀರನ್ನು ಸಂರಕ್ಷಿಸಲು ಸಹಾಯ ಮಾಡುವ ಮನೆಗಳನ್ನು ನಿರ್ಮಿಸುವ ಅಗತ್ಯವನ್ನು ಒತ್ತಿಹೇಳಲು ನಾನು ಈ ಅವಕಾಶವನ್ನು ಬಳಸಲು ಬಯಸುತ್ತೇನೆ. ಬೆಂಗಳೂರಿನಲ್ಲಿ ನನ್ನ ತೋಟದ ಮನೆಗೆ ಏನು ಮಾಡಿದ್ದೇನೆ ಎಂಬುದನ್ನು ಇಲ್ಲಿ ಎಲ್ಲರಿಗೂ ಹೇಳುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ರೀಚಾರ್ಜ್ ಬಾವಿಗಳ ಸ್ಥಾಪನೆ (ಇಂಗು ಗುಂಡಿ)

Chiranjeevi tweets Bengaluru water crisis

20-36 ಅಡಿ ಆಳದ ರೀಚಾರ್ಜ್ ಬಾವಿಗಳನ್ನು ಸೈಟ್‌ನಾದ್ಯಂತ ಆಯಕಟ್ಟಿನ ಬಿಂದುಗಳಲ್ಲಿ ಸ್ಥಾಪಿಸಲಾಗಿದ್ದು, ಮೇಲ್ಮೈ ನೀರಿನ ಹರಿವನ್ನು ರೀಚಾರ್ಜ್ ಬಾವಿಗಳಿಗೆ (ಇಂಗು ಹೊಂಡಗಳು) ನಿರ್ದೇಶಿಸಲು ಸಾಕಷ್ಟು ಇಳಿಜಾರುಗಳಿವೆ. ಪ್ರತಿಯೊಂದು ಬಾವಿಯು ಒಂದು ಶೋಧನೆ ವ್ಯವಸ್ಥೆಯನ್ನು (ಫಿಲ್ಟರ್ ವ್ಯವಸ್ಥೆ) ಹೊಂದಿದೆ, ವಿವಿಧ ಸಮುಚ್ಚಯಗಳನ್ನು ಒಳಗೊಂಡಿರುವ ಒಂದು ಹೂಳು ಬಲೆ, ಅಂದರೆ ಬಂಡೆಯ ಗಾತ್ರಗಳು, ಮರಳು, ಪದರಗಳು ನೀರನ್ನು ಹಾದುಹೋಗಲು ಅನುವು ಮಾಡಿಕೊಡುತ್ತದೆ.

ಇದನ್ನು ಓದಿ: ನಿಮ್ಮ ಹಲ್ಲುಗಳು ಹುಳುಕಾಗಿವೆಯೇ? ಹಲ್ಲು ನೋವಿಗೆ ಸಿಂಪಲ್‌ ಮನೆ ಮದ್ದು

ರೀಚಾರ್ಜ್ ಬಾವಿ – ರೀಚಾರ್ಜ್ ಪಿಟ್ಗೆ ಹೋಲಿಸಿದರೆ – ಹೆಚ್ಚು ನೀರನ್ನು ಸಂಗ್ರಹಿಸುತ್ತದೆ. ಆಳವಾದ ಜಲಚರಗಳನ್ನು ತಲುಪಲು ಮೇಲ್ಮೈಯಲ್ಲಿನ ಸರಂಧ್ರ ಪದರಗಳ ಮೂಲಕ ನೀರು ಹೆಚ್ಚು ನಿಧಾನವಾಗಿ ಹರಿಯುತ್ತದೆ. ನಾನು ಪರ್ಮಾಕಲ್ಚರ್ ತತ್ವಗಳನ್ನು ಸಹ ಜಾರಿಗೆ ತಂದಿದ್ದೇನೆ. ಪರ್ಮಾಕಲ್ಚರ್ ಪರಿಸರವನ್ನು ಪುನರುಜ್ಜೀವನಗೊಳಿಸುವ ವೃತ್ತಾಕಾರದ ತತ್ವದ ಮೇಲೆ ಕಾರ್ಯನಿರ್ವಹಿಸುತ್ತದೆ. ಅದನ್ನು ಸ್ವಾವಲಂಬಿಯನ್ನಾಗಿ ಮಾಡುವುದು. ಪರ್ಮಾಕಲ್ಚರ್‌ನ ಮುಖ್ಯ ಫಲಿತಾಂಶವೆಂದರೆ ನೀರಿನ ಬೇಡಿಕೆಯ ಕಡಿತ.

ಇದನ್ನು ಓದಿ: ನಿಮ್ಮ ಬಳಿ PAN card ಇದೆಯೇ? ಈ ತಪ್ಪುಗಳನ್ನು ಮಾಡಿದರೆ ರೂ.10 ಸಾವಿರದವರೆಗೆ ಬಾರಿ ದಂಡ…!

ಈ ಕ್ರಮಗಳನ್ನು ತೆಗೆದುಕೊಳ್ಳುವುದರಿಂದ ನಾವು ನೀರನ್ನು ಸಂರಕ್ಷಿಸಬಹುದು. ಮಳೆನೀರು ಕೊಯ್ಲು ಸುಧಾರಿಸಬಹುದು ಮತ್ತು ಪರಿಸರ ಸ್ನೇಹಿ ಮನೆಗಳನ್ನು ನಿರ್ಮಿಸಬಹುದು. ಆ ದೃಶ್ಯಗಳನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. ಸದ್ಯ, ಮೆಗಾ ಸ್ಟಾರ್ ಚಿರಂಜೀವಿ ಅವರು ಮಾಡಿದ ಈ ಟ್ವೀಟ್‌ ಎಲ್ಲೆಡೆ ವೈರಲ್‌ ಆಗುತ್ತಿದೆ.

ವಾಟ್ಸಾಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ ಇಲ್ಲಿಕ್ಲಿಕ್ಮಾಡಿ
Share This Article
Follow:
Kannada news - Vijayaprabha is a live Kannada news portal offering Kannada news online, Movie News in Kannada, Sports News in Kannada, Business News in Kannada & all Kannada Newspaper updates, Current Affairs in Karnataka & around the India in Kannada language.
Leave a comment

Leave a Reply

Your email address will not be published. Required fields are marked *

Exit mobile version