ಬೆಂಗಳೂರು: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ನಟ ಅಶೋಕ್ ರಾವ್ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರಿನ ವಿದ್ಯಾರಣ್ಯಪುರದ ನಿವಾಸದಲ್ಲಿ ಹಿರಿಯ ನಟ ಅಶೋಕ್ ರಾವ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥ ಮಾಡಲಾಗಿದೆ. ಕನ್ನಡದ 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟ ಅಶೋಕ್ ರಾವ್ ಹಿರಿಯ ಕಲಾವಿದರಾಗಿದ್ದರು.
ಇನ್ನು ಡಾ| ರಾಜ್ ಕುಮಾರ್ ಅವರೇ ಕರೆದು ತಮ್ಮ ಪರಶುರಾಮ ಚಿತ್ರದಲ್ಲಿ ಖಳನಾಯಕನ ಪಾತ್ರ ಮಾಡಿಸಿದ್ದು, ಪರಶುರಾಮ ಸಿನಿಮಾ ಅಶೋಕ್ ರಾವ್ ಅವರು ಒಳ್ಳೆಯ ಹೆಸರನ್ನು ತಂದು ಕೊಟ್ಟಿತ್ತು.
ವಿದ್ಯಾರಣ್ಯಪುರದ ನಿವಾಸದಲ್ಲಿ ಅಶೋಕ್ ಅವರ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದ್ದು, ಇವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.




