Darshan bail : ಇಂದು ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ; ಅರ್ಜಿಯಲ್ಲಿ ಏನಿದೆ ಗೊತ್ತಾ..?

Darshan bail : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy murder case) ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನು ಅರ್ಜಿಯ (bail application)ವಿಚಾರಣೆ ಇಂದು ನಡೆಯಲಿದೆ. ಹೌದು, ಬೆಂಗಳೂರಿನ 57ನೇ ಸಿಟಿ ಸಿವಿಲ್‌ ನ್ಯಾಯಾಲಯ ದರ್ಶನ್‌…

Actor Darshan bail

Darshan bail : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy murder case) ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನು ಅರ್ಜಿಯ (bail application)ವಿಚಾರಣೆ ಇಂದು ನಡೆಯಲಿದೆ.

ಹೌದು, ಬೆಂಗಳೂರಿನ 57ನೇ ಸಿಟಿ ಸಿವಿಲ್‌ ನ್ಯಾಯಾಲಯ ದರ್ಶನ್‌ ಬೇಲ್‌ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ. ಸೆ. 21ರಂದೇ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿದ್ದ ನ್ಯಾಯಾಲಯ ಕಾಮಾಕ್ಷಿಪಾಳ್ಯ ಪೊಲೀಸರಿಗೆ ನೋಟಿಸ್‌ ಜಾರಿ ಮಾಡಿ, ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು. ಹೀಗಾಗಿ ಕಾಮಾಕ್ಷಿಪಾಳ್ಯ ಠಾಣೆಯ ತನಿಖಾಧಿಕಾರಿಗಳು ಇಂದು ಆಕ್ಷೇಪಣೆ ಸಲ್ಲಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ಇಂದಿನ ಹವಾಮಾನ ವರದಿ; ರಾಜ್ಯದಲ್ಲಿ ಮೂರು ದಿನ ಭಾರಿ ಮಳೆ… ಎಲ್ಲಿಲ್ಲಿ?

Vijayaprabha Mobile App free

Darshan bail : ದರ್ಶನ್‌ ಜಾಮೀನು ಅರ್ಜಿಯಲ್ಲಿ ಏನಿದೆ?

ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ದರ್ಶನ್​ ಪರ ವಕೀಲರು ದರ್ಶನ್‌ಗೆ ಜಾಮೀನು ಕೋರಿ ಕೋರ್ಟ್​​​ಗೆ ಅರ್ಜಿ ಸಲ್ಲಿಸಿದ್ದಾರೆ. ಹತ್ಯೆಗೂ ದರ್ಶನ್​​​ಗೂ ಸಂಬಂಧವಿಲ್ಲ ಎಂದು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಹೊಸ ಪಡಿತರ ಚೀಟಿಗೆ ಅರ್ಜಿ; ಸರ್ಕಾರದಿಂದ ಮಹತ್ವದ ಮಾಹಿತಿ!

ಕಿಡ್​​​​​ನ್ಯಾಪ್​​​ನಲ್ಲಿ ದರ್ಶನ್ ಅವರ ಯಾವ​ ಪಾತ್ರವಿಲ್ಲ. A-10 ಆರೋಪಿ ವಿನಯ್, A-3 ಆರೋಪಿ ಪವನ್ ಸೂಚನೆ ಮೇರೆಗೆ ರೇಣುಕಾಸ್ವಾಮಿಗೆ ಕಿಡ್​​​​​​​​ನ್ಯಾಪ್​​ ಮಾಡಲಾಗಿದೆ ಎಂದು ಜಾಮೀನು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿಯಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.