ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಈಗ ಬರೀ ಡಿವೋರ್ಸ್ ಪ್ರಕರಣಗಳದ್ದೇ ಸುದ್ದಿ ಹೆಚ್ಚು. ಇದೀಗ ನಟ ದುನಿಯಾ ವಿಜಯ್ ಪತ್ನಿ ನಾಗರತ್ನ ಅವರೊಂದಿಗಿನ ವಿಚ್ಛೇದನಕ್ಕಾಗಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ಇದನ್ನು ಓದಿ: ಈ ಜಿಲ್ಲೆಗಳಲ್ಲಿ ಭಾರೀ ಗುಡುಗು, ಮಳೆ, ಗಾಳಿ!
ಹೌದು, ನಟ ದುನಿಯಾ ವಿಜಯ್ ಅವರು ಬೆಂಗಳೂರಿನ ಶಾಂತಿ ನಗರ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು. ಆರೋಪ ಸಾಬಿತುಪಡಿಸಲು ವಿಫಲವಾದ ಹಿನ್ನೆಲೆಯಲ್ಲಿ ಆ ಅರ್ಜಿಯನ್ನು ನ್ಯಾಯಾಧೀಶರು ವಜಾಗೊಳಿಸಿದ್ದಾರೆ. 2018ರಲ್ಲಿ ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಅರ್ಜಿ ಸಲ್ಲಿಸಿದ್ದರು. ಸುಮಾರು 6 ವರ್ಷಗಳಿಂದ ಈ ವಿಚಾರಣೆ ನಡೆಯುತ್ತಿದೆ.
ಇನ್ನು, ಮೊದಲ ಪತ್ನಿ ನಾಗರತ್ನ ಅವರಿಂದ ನಟ ದುನಿಯಾ ವಿಜಯ್ ದೂರವಾಗಿದ್ದು, ಸದ್ಯ ಎರಡನೇ ಪತ್ನಿ ಕೀರ್ತಿ ಗೌಡ ಜೊತೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ.
ಇದನ್ನು ಓದಿ: ರೇಣುಕಾಸ್ವಾಮಿ ಕೊಲೆ ಕೇಸ್; ಬೆಚ್ಚಿಬೀಳಿಸುವ ಸಂಗತಿ ಬಯಲು
ಪ್ರಮುಖ ಲಿಂಕುಗಳು/ Important links
| ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
| ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |




