ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಚನ್ನಪಟ್ಟಣದಿಂದ ನಿಖಿಲ್ ಕುಮಾರಸ್ವಾಮಿ ಕಣಕ್ಕೆ!

Channapatna by-election : ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಬಹುತೇಕ ಅಂತಿಮವಾಗಿದೆ ಎನ್ನಲಾಗುತ್ತಿದೆ. ಹೌದು, ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ…

nikhil kumaraswamy and h d kumaraswamy vijayaprabha news

Channapatna by-election : ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಬಹುತೇಕ ಅಂತಿಮವಾಗಿದೆ ಎನ್ನಲಾಗುತ್ತಿದೆ.

ಹೌದು, ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಮೂರನೇ ಬಾರಿಗೆ ಚನ್ನಪಟ್ಟಣದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ ಎನ್ನಲಾಗಿದೆ. ಕಾರ್ಯಕರ್ತರ ಒತ್ತಾಯಕ್ಕೆ ಮಣಿದ ಜೆಡಿಎಸ್ ಚನ್ನಪಟ್ಟಣದಿಂದ ನಿಖಿಲ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ.

ಈ ಹಿಂದೆ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಚುನಾವಣೆ, ರಾಮನಗರ ವಿಧಾನಸಭಾ ಚುನಾವಣೆ ಸೇರಿ ಒಟ್ಟು ಎರಡು ಭಾರೀ ಚುನಾವಣೆಯಲ್ಲಿ ಸೋಲು ಕಂಡಿದ್ದು, ಈಗ ಅವರು ಮತ್ತೆ ಮೂರನೇ ಬಾರಿಗೆ ಅದೃಷ್ಟ ಪರೀಕ್ಷೆ ಇಳಿದಿದ್ದಾರೆ ಎನ್ನಲಾಗಿದೆ.

Vijayaprabha Mobile App free

ಇನ್ನು, ಚನ್ನಪಟ್ಟಣ ಟಿಕೆಟ್ ಫೈನಲ್ ಕುರಿತು ಮೈತ್ರಿ ಪಕ್ಷಗಳಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದ್ದು, ಇಂದು ಸಂಜೆ ಹೊತ್ತಿಗೆ ಅಧಿಕೃತ ಘೋಷಣೆ ಆಗುವ ಸಾಧ್ಯತೆ ಇದ್ದು, ಸಿ ಪಿ ಯೋಗೇಶ್ವರ್ ವಿರುದ್ಧ ಕಣ್ಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.