ಬೆಂಗಳೂರು: ಉತ್ತರ ಪ್ರದೇಶದ ಹತ್ರಾಸ್ ಗ್ರಾಮದಲ್ಲಿ 19 ವರ್ಷದ ಬಾಲಕಿ ಮನಿಷಾ ವಾಲ್ಮೀಕಿ ಅವರ ಮೇಲೆ ನಡೆದ ಅತ್ಯಾಚಾರ ಪ್ರಕರಣ ಇಡೀ ದೇಶವನ್ನೇ ತಲ್ಲಣಗೊಳಿಸಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಜಸ್ಟಿಸ್ ಫ಼ಾರ್ ಮನಿಷಾ ಎಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇನ್ನು ಅತ್ಯಾಚಾರ, ಅನ್ಯಾಯ, ಭ್ರಷ್ಟಾಚಾರ ಬಗ್ಗೆ ನಟ, ಪ್ರಜಕೀಯ ಸ್ಥಾಪಕ ರಿಯಲ್ ಸ್ಟಾರ್ ಉಪೇಂದ್ರ ಅವರು ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ನಟ ರಿಯಲ್ ಸ್ಟಾರ್ ಉಪೇಂದ್ರ ಅವರು “ಪ್ರಜೆಗಳಿಗೋಸ್ಕರ ಪ್ರಜೆಗಳು ಬಯಸಿದಂತೆ ಕೆಲಸ ಮಾಡುವ ಅಧಿಕಾರಿಗಳು ಮತ್ತು ಪೊಲೀಸರು ಇರುವಂತಹ ವ್ಯವಸ್ಥೆ ಬೇಕಿದೆ. ನಾಯಕರು ಹೇಳಿದಂತೆ ನಡೆಯುವ ವ್ಯವಸ್ಥೆಯಲ್ಲ’ ಎಂದು ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ. ‘ಅತ್ಯಾಚಾರ, ಭ್ರಷ್ಟಾಚಾರ, ಅನ್ಯಾಯ, ಅಕ್ರಮ, ಬಡತನ, ನಿರುದ್ಯೊಗ, ಹೀಗೆ.. ಈ ಎಲ್ಲ ಸಮಸ್ಯೆಗಳ ಮೂಲ ಇದೇ ಎಂದು ನಿಮಗೆ ಅನ್ನಿಸುತ್ತಿಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.
ಇದನ್ನು ಓದಿ: ಉತ್ತರ ಪ್ರದೇಶ ಅತ್ಯಾಚಾರ ಪ್ರಕರಣ; ಗ್ರಾಮ ಪ್ರವೇವಶಕ್ಕೆ ಮಾಧ್ಯಮಗಳಿಗೆ ನಿಷೇಧ ಹೇರಿದ ಯೋಗಿ ಸರ್ಕಾರ; ಕಾಂಗ್ರೆಸ್ ಕಿಡಿ
ಅತ್ಯಾಚಾರ, ಭ್ರಷ್ಟಾಚಾರ, ಅನ್ಯಾಯ, ಅಕ್ರಮ, ಬಡತನ, ನಿರುದ್ಯೊಗ….
ಈ ಎಲ್ಲ ಸಮಸ್ಯೆಗಳ ಮೂಲ ಇದೇ ಎಂದು ನಿಮಗೆ ಅನ್ನಿಸುತ್ತಿಲ್ಲವೇ ? pic.twitter.com/BzrV7RKVds— Upendra (@nimmaupendra) October 1, 2020